ಸ್ನೇಹಿತನೊಂದಿಗೆ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ತಂಗಿಗೆ ಗುಂಡು ಹಾರಿಸಿದ ಅಣ್ಣ !
Team Udayavani, Nov 20, 2020, 4:01 PM IST
ದೆಹಲಿ: ತನ್ನ ಗೆಳೆಯನೊಂದಿಗೆ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದಳು ಎಂಬ ಕಾರಣಕ್ಕೆ 17 ವರ್ಷದ ಬಾಲಕನೊಬ್ಬ ತನ್ನ ತಂಗಿಗೆ ಗನ್ ನಿಂದ ಶೂಟ್ ಮಾಡಿದ ಘಟನೆ ಈಶಾನ್ಯ ದೆಹಲಿ ಭಾಗದಲ್ಲಿ ನಡೆದಿದೆ.
ಬಾಲಕಿಯು ತನ್ನ ಸ್ನೇಹಿತನೊಂದಿಗೆ ವಾಟ್ಸಾಪ್ ಚಾಟ್ ಮಾಡುತ್ತಿದ್ದಳು ಮಾತ್ರವಲ್ಲದೆ ಪೋನ್ ಮೂಲಕ ಮಾತನಾಡುತ್ತಿದ್ದಳು. ಇದರಿಂದ ರೊಚ್ಚಿಗೆದ್ದ ಆಕೆಯ 17 ವರ್ಷದ ಸಹೋದರ ಬಂದೂಕು ಮೂಲಕ ತನ್ನ ತಂಗಿಯ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿಯಿಂದ ಬಾಲಕಿಯು ಗಂಭೀರ ಗಾಯಗೊಂಡಿದ್ದು, ಜಗ್ ಪ್ರವೇಶ ಚಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಬಾಲಕಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆಂದು ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ.
ಆರೋಪಿ ಬಾಲಕ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವುದು ಮಾತ್ರವಲ್ಲದೆ, ಸೆಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕಳೆದ ಮೂರು ನಾಲ್ಕು ತಿಂಗಳ ಹಿಂದೆ ತನ್ನ ಸ್ನೇಹಿತನೋರ್ವನ ಬಳಿ ಬಂದೂಕು ಸೇರಿದಂತೆ ಹಲವು ಮಾರಕಾಸ್ತ್ರ ತೆಗೆದುಕೊಂಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಕುರಿತಾಗಿ ಸಮಗ್ರ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ.
ತನ್ನ ಹೆತ್ತವರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಬಾಲಕಿ ಶಾಲೆಯಿಂದ ಹೊರಗುಳಿದಿದ್ದಳು ಎನ್ನಲಾಗಿದೆ. ಆಕೆಯು ಈ ಹಿಂದಿನಿಂದಲೂ ತನ್ನ ಗೆಳೆಯನೊಂದಿಗೆ ಮಾತನಾಡುವುದನ್ನು ಸಹೋದರ ಗಮನಿಸಿದ್ದು, ಹಲವು ಬಾರಿ ವಿರೋಧ ವ್ಯಕ್ತಪಡಿಸಿದ್ದ.
ಇದನ್ನೂ ಓದಿ:ಕ್ರೈಸ್ತ ಅಭಿವೃದ್ಧಿ ನಿಗಮ ರದ್ದು ವಿಚಾರ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಐವನ್ ಡಿಸೋಜ
ಕಳೆದ ಗುರುವಾರ (ನ.19) ಬಾಲಕಿಯು ತನ್ನ ಗೆಳೆಯನೊಂದಿಗೆ ಮಾತುಕತೆಯಲ್ಲಿ ತೊಡಗಿದ್ದಾಗ, ಸಹೋದರನು ಇದನ್ನು ವಿರೋಧಿಸಿ ಗಲಾಟೆ ನಡೆಸಿದ್ದಾನೆ. ಇದು ವಿಕೋಪಕ್ಕೆ ತಿರುಗಿ ತನ್ನಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ