ಲೂಟಿಗೆ ಪ್ರತಿರೋಧಿಸಿದ ಬಾಲಕನನ್ನು ಇರಿದು ಕೊಂದ ದುಷ್ಕರ್ಮಿಗಳು
Team Udayavani, Mar 13, 2017, 4:52 PM IST
ಮಧುರೆ : ನಿನ್ನೆ ಭಾನುವಾರ ರಾತ್ರಿ ಮನೆಗೆ ಮರುಳುತ್ತಿದ್ದ ಪಿಯುಸಿ ವಿದ್ಯಾರ್ಥಿಯನ್ನು ಇಲ್ಲಿನ ಈಸ್ಟ್ ಗೇಟ್ ಪ್ರದೇಶದಲ್ಲಿನ ರಸ್ತೆಯಲ್ಲಿ ಅಡ್ಡಗಟ್ಟಿ ಆತನ ಬಳಿ ಇದ್ದ ಮೊಬೈಲ್ ಫೋನ್ ಮತ್ತು ಸ್ವಲ್ಪ ನಗದು ಹಣವನ್ನು ಲೂಟಿ ಮಾಡಿದ ದುಷ್ಕರ್ಮಿಗಳ ಗ್ಯಾಂಗ್ ಒಂದು, ತಮಗೆ ಪ್ರತಿರೋಧ ಒಡ್ಡಿದ ಕಾರಣಕ್ಕೆ ಆತನನ್ನು ಬಲವಾಗಿ ಇರಿದು ಕೊಂದು ಪರಾರಿಯಾಗಿದೆ.
ಮೃತ ಬಾಲಕ ನಾಗರಾಜ್, ತನ್ನನ್ನು ಲೂಟಿ ಮಾಡಲೆತ್ನಿಸಿದ ದುಷ್ಕರ್ಮಿಗಳ ವಿರುದ್ಧ ಹೋರಾಡಿದ್ದ. ಆತನಿಂದ ಮೊಬೈಲ್ ಹಾಗೂ ನಗದನ್ನು ಕಸಿದ ದುಷ್ಕರ್ಮಿಗಳು ಬಳಿಕ ಆತನ ತೊಡೆಗೆ ಬಲವಾಗಿ ಇರಿದು ಪರಾರಿಯಾದರು.
ತೀವ್ರ ರಕ್ತಸ್ರಾವಕ್ಕೆ ಗುರಿಯಾಗಿದ್ದ ನಾಗರಾಜನನ್ನು ರಕ್ಷಿಸಲು ಯಾರೂ ಆಸುಪಾಸಿನಲ್ಲಿ ಇರಲಿಲ್ಲ. ಹಾಗಾಗಿ ಆತ ರಸ್ತೆಯಲ್ಲೇ ಅಸುನೀಗಿದ. ಮಧ್ಯರಾತ್ರಿಯ ಹೊತ್ತಿಗೆ ನಾಗರಾಜ್ ಸತ್ತಿರುವುದು ಗೊತ್ತಾಯಿತು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದುಷ್ಕರ್ಮಿಗಳನ್ನು ಹಿಡಿಯಲು ವಿಶೇಷ ತಂಡವೊಂದನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?