ಪಾಕ್‌ ಕೈ ಸೇರಿತೇ ಬ್ರಹ್ಮೋಸ್‌ ಮಾಹಿತಿ?


Team Udayavani, Oct 9, 2018, 5:05 AM IST

brahmos-8-10.jpg

ನಾಗ್ಪುರ: ಭಾರತದ ಅಣ್ವಸ್ತ್ರ ಸಜ್ಜಿತ ಬ್ರಹ್ಮೋಸ್‌ ಕ್ಷಿಪಣಿಯ ಸೂಕ್ಷ್ಮ ವಿವರಗಳು ಪಾಕ್‌ ಕೈಸೇರಿವೆಯೇ? ಹೀಗೊಂದು ಬಲವಾದ ಅನುಮಾನ ಹುಟ್ಟಿಕೊಂಡಿದೆ. ಕ್ಷಿಪಣಿಯ ಗೌಪ್ಯ ಮಾಹಿತಿಗಳನ್ನು ಡಿಆರ್‌ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ಕೇಂದ್ರದಿಂದ ಪಾಕಿಸ್ಥಾನಕ್ಕೆ ರವಾನಿಸಿದ್ದಾನೆ ಎನ್ನಲಾಗಿರುವ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ. ನಿಶಾಂತ್‌ ಅಗರ್‌ವಾಲ್‌ ಆರೋಪಿಯಾಗಿದ್ದು, ನಾಗ್ಪುರದಲ್ಲಿ ಈತನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ. ನಾಲ್ಕು ವರ್ಷಗಳಿಂದ ಈತ ನಾಗ್ಪುರದ ಡಿಆರ್‌ಡಿಒ ಕೇಂದ್ರದ ಉದ್ಯೋಗಿಯಾಗಿದ್ದ. ಮೂಲಗಳ ಪ್ರಕಾರ ಈತ ಪಾಕ್‌ ಹಾಗೂ ಅಮೆರಿಕದ ಏಜೆನ್ಸಿಗಳಿಗೆ ಬ್ರಹ್ಮೋಸ್‌ ಬಗ್ಗೆ ಸೂಕ್ಷ್ಮ ಮಾಹಿತಿ ರವಾನಿಸಿದ್ದಾನೆ.

ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್‌) ಹಾಗೂ ಸೇನಾ ಗುಪ್ತಚರ ದಳ ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ. ಸ್ಥಳೀಯ ಪೊಲೀಸರೂ ನೆರವಾಗಿದ್ದಾರೆ. ಈ ಸಂಬಂಧ ದಾಳಿ ಇನ್ನೂ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ. ನಿಶಾಂತ್‌ನಿಂದ ಕೆಲವು ಮಹತ್ವದ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಹಿಂದೆಯೂ ನಡೆದಿತ್ತು
ಪಾಕಿಸ್ಥಾನ ಭಾರತದ ಸೇನೆ ಹಾಗೂ ವಿವಿಧ ಹಂತಗಳ ಅಧಿಕಾರಿಗಳ ಮೂಲಕ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಪ್ರಯತ್ನ ಮಾಡಿದ್ದು ಇದೇ ಮೊದಲೇನಲ್ಲ. ಕಳೆದ ತಿಂಗಳಷ್ಟೇ ಬಿಎಸ್‌ಎಫ್ ಯೋಧರೊಬ್ಬರನ್ನು ಹನಿ ಟ್ರ್ಯಾಪ್‌ ಮಾಡಿದ ವಿಚಾರ ಬಯಲಾಗಿತ್ತು. ಇವರಿಂದ ಸೂಕ್ಷ್ಮ ಮಾಹಿತಿಯನ್ನು ಪಾಕ್‌ ಐಎಸ್‌ಐ ಪಡೆದಿತ್ತು ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲದೆ ಮೇಯಲ್ಲಿ ಉತ್ತರಾಖಂಡದ ವ್ಯಕ್ತಿಯೊಬ್ಬನನ್ನು ಐಎಸ್‌ಐ ಗೂಢಚರ ಎಂಬ ಅನುಮಾನದ ಮೇಲೆ ಬಂಧಿಸಲಾಗಿತ್ತು.

ಬ್ರಹ್ಮೋಸ್‌ ಕ್ಷಿಪಣಿ ಯಾಕೆ ಮಹತ್ವದ್ದು?
ಬ್ರಹ್ಮೋಸ್‌ ಮಧ್ಯಮ ಶ್ರೇಣಿಯ ಸೂಪರ್‌ಸಾನಿಕ್‌ ಕ್ಷಿಪಣಿ. ಇದರ ಸಾಮರ್ಥ್ಯ ಎಷ್ಟಿದೆಯೆಂದರೆ ಸಬ್‌ಮರೀನ್‌, ಹಡಗುಗಳು, ವಿಮಾನ ಹಾಗೂ ಭೂಮಿ ಮೇಲಿಂದಲೂ ಉಡಾವಣೆ ಮಾಡಬಹುದಾಗಿದೆ. ವಿಶ್ವದಲ್ಲೇ ಅತ್ಯಂತ ವೇಗದ ಕ್ಷಿಪಣಿ ಇದು. ರಷ್ಯಾದ ಎನ್‌ಪಿಒ ಮಶಿನೋಸ್ತ್ರೇಯೋನಿಯಾ ಮತ್ತು ಡಿಆರ್‌ಡಿಒ ಇದನ್ನು ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಕಳೆದ ನವೆಂಬರ್‌ನಲ್ಲಷ್ಟೇ ಇದರ ಸುಧಾರಿತ ಆವೃತ್ತಿಯನ್ನು ಪ್ರಯೋಗಿಸಲಾಗಿತ್ತು. ಈ ವೇಳೆ ಭೂಮಿ, ವಾಯು ಮತ್ತು ಸಮುದ್ರದಿಂದಲೂ ಉಡಾವಣೆ ಮಾಡಬಹುದಾದ ಸಾಮರ್ಥ್ಯ ಇದಕ್ಕೆ ಲಭ್ಯವಾಗಿತ್ತು. ಹೀಗಾಗಿ ಇದರ ತಾಂತ್ರಿಕ ವಿವರಗಳು ಅತ್ಯಂತ ಸೂಕ್ಷ್ಮವಾಗಿದ್ದು, ಪಾಕಿಸ್ಥಾನಕ್ಕೆ ಸಿಕ್ಕಿದಲ್ಲಿ ಪ್ರತ್ಯಸ್ತ್ರ ತಯಾರಿಸುವ ಆತಂಕ ಎದುರಾಗಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.