ರಾಂಗ್ ಸೈಡ್ ನಿಂದ ಬಂದ ಬಸ್ಸನ್ನೆ ತಡೆದ ದಿಟ್ಟ ಮಹಿಳೆ : ವಿಡಿಯೋ ವೈರಲ್!


Team Udayavani, Sep 26, 2019, 5:36 PM IST

Scooty-Rider-26-9

ತಿರುವನಂತಪುರಂ: ರಸ್ತೆಯಲ್ಲಿ ನೀವು ನಿಮ್ಮ ವಾಹನವನ್ನು ಚಲಾಯಿಸುವಾಗ ನಿಮಗೆ ಚಿತ್ರ ವಿಚಿತ್ರ ಪರಿಸ್ಥಿತಿಗಳೆಲ್ಲಾ ಎದುರಾಗಬಹುದು. ನೀವು ಸರಿಯಾದ ರೀತಿಯಲ್ಲೇ ನಿಮ್ಮ ವಾಹನ ಚಲಾಯಿಸುತ್ತಿದ್ದರೂ ಬೇರೆಯವರ ತಪ್ಪುಗಳು ನಿಮ್ಮನ್ನು ಅಪಘಾತದಂತಹ ತೊಂದರೆಗೆ ಸಿಲುಕಿಸುವ ಸಾಧ್ಯತೆಗಳೂ ಇರುತ್ತವೆ. ಆದರೆ ಕೆಲವರು ರಸ್ತೆಯಲ್ಲಿ ಬೇರೆ ವಾಹನಗಳಿಂದ ತಮಗೆ ಎದುರಾಗುವ ತೊಂದರೆಗಳಿಗೆ ಸ್ಥಳದಲ್ಲಿಯೇ ಪ್ರತಿಕ್ರಿಯೆ ನೀಡುತ್ತಾರೆ, ಅಥವಾ ತಮ್ಮದೇ ತಪ್ಪಿದ್ದರೂ ರಸ್ತೆಯಲ್ಲೇ ಜಗಳಕ್ಕೆ ನಿಂತುಬಿಡುತ್ತಾರೆ. ಇವೆಲ್ಲಾ ಕೆಲವೊಮ್ಮೆ ಹೊಡೆದಾಟದ ಮಟ್ಟದಲ್ಲಿ ಕೊನೆಗೊಳ್ಳುವುದನ್ನೂ ನಾವು ನೋಡಿದ್ದೇವೆ. ಮತ್ತು ಇಂತಹ ಪ್ರಕರಣಗಳು ಹೆಚ್ಚಾಗಿ ಪುರುಷ ವಾಹನ ಸವಾರರ ನಡುವೆ ನಡೆಯುತ್ತಿರುತ್ತದೆ.

ಆದರೆ ಕೇರಳದಲ್ಲಿ ನಡೆದಿರುವ ಘಟನೆಯೊಂದು ಇದಕ್ಕೆಲ್ಲಾ ವ್ಯತಿರಿಕ್ತವಾಗಿದೆ. ತನ್ನ ಎದುರಿಗೆ ಸರಕಾರಿ ಬಸ್ಸೊಂದು ರಾಂಗ್ ಸೈಡ್ ನಿಂದ ಬರುತ್ತಿದ್ದರೂ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಭಯಪಡದೆ ತನ್ನ ಪಥವನ್ನು ಬಿಡದೇ ಆ ಬಸ್ಸನ್ನೇ ಸರಿಯಾದ ಪಥಕ್ಕೆ ತಿರುಗಿಸಿದ ಘಟನೆಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮತ್ತು ಈ ಮಹಿಳೆಯ ಗಟ್ಟಿಗಿತ್ತಿತನಕ್ಕೆ ನೆಟ್ಟಿಗರು ಭಾರೀ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.


ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಎಡಬದಿಯಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ರಾಂಗ್ ಸೈಡ್ ಮೂಲಕ ಬರುತ್ತಿರುತ್ತದೆ. ಆ ಬಸ್ಸು ತನ್ನ ಹತ್ತಿರಕ್ಕೆ ಬರುತ್ತಿರುವುದನ್ನು ಗಮನಿಸಿದ ಆ ಮಹಿಳೆ ತನ್ನ ಸ್ಕೂಟಿಯಲ್ಲಿ ನಿಂತ ಜಾಗದಲ್ಲೇ ನಿಂತು ಬಿಡುತ್ತಾರೆ. ಕೊನೆಗೆ ಬಸ್ಸು ಚಾಲಕನೇ ತನ್ನ ಎಡಬದಿಗೆ ಬಸ್ಸನ್ನು ಚಲಾಯಿಸಿಕೊಂಡು ಸರಿಯಾದ ರೀತಿಯಲ್ಲಿ ಮುಂದೆ ಹೋಗುತ್ತಾನೆ.

ರಾಂಗ್ ಸೈಡಿನಿಂದ ಬಸ್ಸನ್ನು ಚಲಾಯಿಸಿಕೊಂಡು ಮಹಿಳೆಯ ಸ್ಕೂಟಿಗೆ ತೀರಾ ಹತ್ತಿರ ಬಂದಿದ್ದ ಬಸ್ ಚಾಲಕ, ಈ ಮಹಿಳೆ ಬದಿಗೆ ಸರಿಯುವ ಮೂಲಕ ತನ್ನ ಬಸ್ಸಿಗೆ ದಾರಿ ಬಿಡಬಹುದೆಂದು ಅಂದುಕೊಂಡಿದ್ದ. ಆದರೆ ಮಹಿಳೆ ತಾನಿದ್ದ ರಸ್ತೆಯ ಬದಿಯಿಂದ ಒಂದಿಂಚೂ ಕದಲದೇ ಇದ್ದಾಗ ವಿಧಿಯಿಲ್ಲದೇ ಬಸ್ಸಿನ ಚಾಲಕ ತನ್ನ ಬಸ್ಸನ್ನು ಕಷ್ಟಪಟ್ಟು ಎಡಗಡೆಗೆ ತಿರುಗುಸುಕೊಂಡು ಮುಂದಕ್ಕೆ ಸಾಗುವ ದೃಶ್ಯ ಈ ವಿಡಿಯೋದಲ್ಲಿ ದಾಖಲಾಗಿದೆ.

ತನ್ನೆದುರಿಗೆ ಅಷ್ಟು ದೊಡ್ಡ ಬಸ್ಸು ನಿಂತಿದ್ದರೂ ಅಳುಕದೇ ದೃಢವಾಗಿ ನಿಂತು ಆ ಬಸ್ಸು ಚಾಲಕನ ತಪ್ಪನ್ನು ತನ್ನ ಮೌನ ಪ್ರತಿಭಟನೆಯ ಮೂಲಕವೇ ಆತನಿಗೆ ಮನವರಿಕೆ ಮಾಡಿಕೊಟ್ಟ ಮಹಿಳೆಯ ದಿಟ್ಟತನಕ್ಕೆ ಇದೀಗ ನೆಟ್ಟಿಗರು ‘ಕುಡೋಸ್’ ಅನ್ನುತ್ತಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.