ಭಾರತಕ್ಕೆ ಭೇಟಿ ನೀಡಲು ಕಾತುರನಾಗಿದ್ದೇನೆ, ಫೇಸ್ ಬುಕ್ ನಲ್ಲಿ ನಾನೇ NO.1: ಟ್ರಂಪ್
Team Udayavani, Feb 15, 2020, 8:20 AM IST
ವಾಷಿಂಗ್ಟನ್: ಈ ತಿಂಗಳಾಂತ್ಯದಲ್ಲಿ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಲು ಕಾತರನಾಗಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲದೆ ಸಾಧ್ಯವಾದರೆ ವ್ಯಾಪರ ಒಪ್ಪಂದಕ್ಕೆ ಸಹಿ ಹಾಕುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಡೊನಾಲ್ಡ್ ಟ್ರಂಪ್ ಫೆಬ್ರವರಿ 24-25ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಅಮೆರಿಕ ಅಧ್ಯಕ್ಷರ ಭೇಟಿ ಬಹಳ ವಿಶೇಷವಾದದ್ದು ಮತ್ತು ಭಾರತವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಇದು ಬಹಳ ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಭಾರತಕ್ಕೆ ಆಹ್ವಾನಿಸಿರುವುದು ಬಹಳ ದೊಡ್ಡ ಗೌರವ, ಮಾರ್ಕ್ ಜುಕರ್ಬರ್ಗ್ ಇತ್ತೀಚೆಗೆ “ಡೊನಾಲ್ಡ್ ಜೆ. ಟ್ರಂಪ್ ಫೇಸ್ಬುಕ್ನಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಭಾರತದ ಪ್ರಧಾನಿ ಮೋದಿ 2ನೇ ಸ್ಥಾನದಲ್ಲಿದ್ದಾರೆ ಎಂದು ತಿಳಿಸಿದ್ದರು. ವಾಸ್ತವವಾಗಿ, ನಾನು ಎರಡು ವಾರಗಳಲ್ಲಿ ಭಾರತಕ್ಕೆ ಹೋಗುತ್ತಿದ್ದೇನೆ. ಮತ್ತು ಅದನ್ನು ಎದುರು ನೋಡುತ್ತಿದ್ದೇನೆ !’ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
Great honor, I think? Mark Zuckerberg recently stated that “Donald J. Trump is Number 1 on Facebook. Number 2 is Prime Minister Modi of India.” Actually, I am going to India in two weeks. Looking forward to it!
— Donald J. Trump (@realDonaldTrump) February 14, 2020
ಅಮೆರಿಕಾದ ಪ್ರಥಮ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಕೂಡಿತ್ತೀಚಿಗೆ ಪ್ರಧಾನಿ ಮೋದಿಯವರಿಗೆ ಟ್ವೀಟ್ಟರ್ ನಲ್ಲಿ ಧನ್ಯವಾದ ಅರ್ಪಿಸಿದ್ದು, ಅಹಮದಾಬಾದ್ ಮತ್ತು ನವದೆಹಲಿಗೆ ಭೇಟಿ ನೀಡುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದರು.
Thank you @narendramodi for the kind invitation. Looking forward to visiting Ahmedabad & New Dehli later this month. @POTUS & I are excited for the trip & to celebrate the close ties between the #USA & #India. https://t.co/49LzQPiVLf
— Melania Trump (@FLOTUS) February 12, 2020
21 ನೇ ಶತಮಾನದಲ್ಲಿ ಭಾರತಕ್ಕೆ ಅಮೆರಿಕಾ ಅಧ್ಯಕ್ಷರ ಮೊದಲ ದ್ವಿಪಕ್ಷೀಯ ಭೇಟಿಯಾಗಿದ್ದು, ತಮ್ಮ ವಿರುದ್ಧ ವಾಗ್ದಂಡನೆಯಿಂದ ಖುಲಾಸೆಗೊಂಡ ನಂತರದ ಮೊದಲ ಪ್ರವಾಸ ಇದಾಗಿದೆ. ಡೊನಾಲ್ಡ್ ಟ್ರಂಪ್ , ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೊಸದಾಗಿ ನಿರ್ಮಿಸಲಾದ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಮೊಟೆರಾ ದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಐತಿಹಾಸಿಕ ಭಾಷಣ ಮಾಡುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ