ಗುಜರಾತಿನ ಜನರಿಂದ ದಾಖಲೆಗಳನ್ನು ಮುರಿಯುವುದರಲ್ಲಿಯೂ ದಾಖಲೆ : ಪ್ರಧಾನಿ ಮೋದಿ

ನಾನು ಜನತಾ ಜನಾರ್ದನನ ಮುಂದೆ ತಲೆಬಾಗುತ್ತೇನೆ....ಸಿಕ್ಕಿರುವ ಜನಬೆಂಬಲ ನವ ಭಾರತದ ಆಶಯಗಳ ಪ್ರತಿಬಿಂಬ

Team Udayavani, Dec 8, 2022, 7:36 PM IST

1-ads-aSAsa

ನವದೆಹಲಿ : ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಗೆಲುವು ದಾಖಲಿಸಿದ್ದು, 182 ಸ್ಥಾನಗಳ ಪೈಕಿ 156 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಜಯ ದಾಖಲಿಸಿದೆ. ”ಗುಜರಾತಿನ ಜನರು ದಾಖಲೆಗಳನ್ನು ಮುರಿಯುವುದರಲ್ಲಿಯೂ ದಾಖಲೆಯನ್ನು ಸೃಷ್ಟಿಸಿದ್ದಾರೆ.ಬಿಜೆಪಿಗೆ ಗುಜರಾತ್ ಇತಿಹಾಸದಲ್ಲೇ ಅತಿ ದೊಡ್ಡ ಜನಾದೇಶ ನೀಡುವ ಮೂಲಕ ರಾಜ್ಯದ ಜನತೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಜಾತಿ, ವರ್ಗ, ಸಮುದಾಯ ಮತ್ತು ಎಲ್ಲಾ ರೀತಿಯ ವಿಭಜನೆಗಳನ್ನು ಮೀರಿ ಬಿಜೆಪಿಗೆ ಮತ ಹಾಕಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಗೆಲುವಿನ ಸಂಭ್ರಮದಲ್ಲಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ”ಬಿಜೆಪಿಗೆ ಸಿಕ್ಕಿರುವ ಜನಬೆಂಬಲ ನವ ಭಾರತದ ಆಶಯಗಳ ಪ್ರತಿಬಿಂಬವಾಗಿದೆ.ಬಿಜೆಪಿಗೆ ಸಿಕ್ಕಿರುವ ಸಾರ್ವಜನಿಕ ಬೆಂಬಲವು ಭಾರತದ ಯುವಜನತೆಯ ‘ಯುವ ಸೋಚ್’ನ ದ್ಯೋತಕವಾಗಿದೆ.ಬಡವರು, ಶೋಷಿತರು, ವಂಚಿತರು, ಆದಿವಾಸಿಗಳ ಸಬಲೀಕರಣಕ್ಕೆ ದೊರೆತ ಬೆಂಬಲವೇ ಬಿಜೆಪಿಗೆ ದೊರೆತ ಸಾರ್ವಜನಿಕ ಬೆಂಬಲ” ಎಂದು ಹೇಳಿದ್ದಾರೆ.

”ಮೊದಲನೆಯದಾಗಿ ನಾನು ಜನತಾ ಜನಾರ್ದನನ ಮುಂದೆ ತಲೆಬಾಗುತ್ತೇನೆ. ಜನತಾ ಜನಾರ್ದನ್ ಅವರ ಆಶೀರ್ವಾದ ಅಪಾರ. ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮಾಡಿದ ಶ್ರಮದ ಸುಗಂಧವನ್ನು ಇಂದು ನಾವು ಎಲ್ಲೆಡೆ ಅನುಭವಿಸುತ್ತಿದ್ದೇವೆ” ಎಂದರು.

”ಬಿಜೆಪಿಯ ಮೇಲಿನ ಈ ಒಲವು ದೇಶದ ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲೂ ಗೋಚರಿಸುತ್ತಿದೆ. ಯುಪಿಯ ರಾಂಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.ಬಿಹಾರ ಉಪಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಮುಂದಿನ ದಿನಗಳ ಸ್ಪಷ್ಟ ಸಂದೇಶ ನೀಡುತ್ತಿದೆ” ಎಂದರು.

”ಆದಷ್ಟು ಬೇಗ ಎಲ್ಲಾ ಸೌಲಭ್ಯಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ತಲುಪಬೇಕು ಎಂಬ ಬಿಜೆಪಿಯ ಆಶಯದಿಂದ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ದೇಶದ ಹಿತದೃಷ್ಟಿಯಿಂದ ಅತಿ ದೊಡ್ಡ ಮತ್ತು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ಬಿಜೆಪಿಗಿದೆ ಎಂಬ ಕಾರಣಕ್ಕೆ ಜನರು ಬಿಜೆಪಿಗೆ ಮತ ಹಾಕಿದ್ದಾರೆ” ಎಂದರು.

”ಯುವಕರು ನಂಬಿಕೆ ಇಟ್ಟು ಸರ್ಕಾರದ ಕೆಲಸ ಕಣ್ಣಿಗೆ ಕಂಡಾಗ ಮಾತ್ರ ಮತ ಹಾಕುತ್ತಾರೆ. ಇಂದು ಯುವಕರು ಬಿಜೆಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದಾಗ, ಯುವಕರು ನಮ್ಮ ಕೆಲಸವನ್ನು ಪರೀಕ್ಷಿಸಿದ್ದಾರೆ ಮತ್ತು ನಂಬಿದ್ದಾರೆ ಎಂಬ ಸಂದೇಶವು ತುಂಬಾ ಸ್ಪಷ್ಟವಾಗಿದೆ” ಎಂದರು.

”ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಶ್ರೀಸಾಮಾನ್ಯನ ಬಯಕೆ ಎಷ್ಟು ಪ್ರಬಲವಾಗಿದೆ ಎಂಬುದನ್ನು ಗುಜರಾತ್ ಫಲಿತಾಂಶಗಳು ಸಾಬೀತುಪಡಿಸಿವೆ.ದೇಶದ ಮುಂದೆ ಸವಾಲು ಎದುರಾದಾಗ ದೇಶದ ಜನತೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂಬ ಸಂದೇಶ ಸ್ಪಷ್ಟವಾಗಿದೆ”ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.