ಬ್ಲೂವೇಲ್ಗೆ ಬ್ರೇಕ್: ಕೇಂದ್ರ ಸರಕಾರದಿಂದ ಕಠಿನ ಕ್ರಮ
Team Udayavani, Aug 16, 2017, 7:34 AM IST
ಹೊಸದಿಲ್ಲಿ: ಮಕ್ಕಳನ್ನು ಬಲಿತೆಗೆದುಕೊಳ್ಳುತ್ತಿರುವ “ಸಾವಿನ ಆಟ’ ಭಾರತಕ್ಕೂ ಕಾಲಿಟ್ಟಿರುವುದರಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ ಈಗ ಬ್ಲೂವೇಲ್ ಚಾಲೆಂಜ್ನ ಲಿಂಕ್ ಅನ್ನು ತತ್ಕ್ಷಣನೇ ತೆಗೆದುಹಾಕಿ ಎಂದು ಇಂಟರ್ನೆಟ್ ದಿಗ್ಗಜ ಕಂಪೆನಿಗಳಿಗೆ ಆದೇಶಿಸಿದೆ.
ಗೂಗಲ್, ಫೇಸ್ಬುಕ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಂ, ಮೈಕ್ರೋಸಾಫ್ಟ್ ಮತ್ತು ಯಾಹೂಗಳಿಗೆ ಈ ಸೂಚನೆ ನೀಡಿರುವ ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, “ಬ್ಲೂವೇಲ್ನಿಂದಾಗಿ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಮಾರಕ ಆಟವನ್ನು ಕೂಡಲೇ ತೆಗೆದುಹಾಕಿ’ ಎಂದು ಹೇಳಿದೆ. ಕೇಂದ್ರ ಕಾನೂನು ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರ ಆದೇಶದ ಮೇರೆಗೆ ಆ.11ರಂದೇ ಈ ಸೂಚನೆ ನೀಡಲಾಗಿದೆ.
50 ದಿನಗಳವರೆಗೆ ವಿವಿಧ ಅಪಾಯಕಾರಿ ಟಾಸ್ಕ್ಗಳನ್ನು ಕೊಡುವ ಈ ಆಟದಿಂದಾಗಿ ಮುಂಬಯಿ ಮತ್ತು ಪ. ಬಂಗಾಲದಲ್ಲಿ ಈಗಾಗಲೇ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಲ್ಲದೆ ಸಾವಿಗೆ ಶರಣಾಗಲು ಹೊರಟಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಈ ಘಟನೆಗಳ ಬಳಿಕ ದೇಶಾದ್ಯಂತ ಆತಂಕದ ಅಲೆ ಸೃಷ್ಟಿಯಾಗಿದ್ದು, ಈ ಆಟಕ್ಕೆ ನಿಷೇಧ ಹೇರುವಂತೆ ಕೋರಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸಹಿತ ಹಲವು ಗಣ್ಯರು ಪ್ರಧಾನಿ ಮೋದಿ ಅವರನ್ನು ಕೇಳಿಕೊಂಡಿದ್ದರು. ಈ ಗೇಮ್ ವಿದೇಶಗಳಲ್ಲಿ ಈಗಾಗಲೇ 200ಕ್ಕೂ ಹೆಚ್ಚು ಮಕ್ಕಳನ್ನು ಬಲಿಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್