ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುಗಳಾಗಿ: ಜೈಶಂಕರ್
Team Udayavani, May 20, 2022, 6:04 AM IST
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆಯ ಬಗ್ಗೆ ಬ್ರಿಕ್ಸ್ ರಾಷ್ಟ್ರಗಳು ಶೂನ್ಯ ಸಹಿಷ್ಣು ಧೋರಣೆ ಹೊಂದಿರಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಬ್ರಿಕ್ಸ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
ಗುರುವಾರ ನಡೆದ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ವರ್ಚುವಲ್ ವಿಧಾನದ ಮೂಲಕ ಭಾಗಿಯಾಗಿದ್ದ ಅವರು, ಬ್ರಿಕ್ಸ್ ರಾಷ್ಟ್ರಗಳು ಯಾವಾಗಲೂ ತಮ್ಮ ಸಾರ್ವಭೌಮತ್ವವನ್ನು, ಪ್ರಾದೇಶಿಕ ಸಮಗ್ರತೆ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳನ್ನು ಕಾಪಾಡುವ ನಿಟ್ಟಿನಲ್ಲಿ ಪರಸ್ಪರ ಸಹಕಾರ ಕೊಡುವ ವಾಗ್ಧಾನದೊಂದಿಗೆ ಹೆಜ್ಜೆ ಹಾಕುತ್ತಿವೆ. ಈ ವಾಗ್ಧಾನವನ್ನು ಯಾರೂ ಮರೆಯಬಾರದು ಎಂದು ಜೈಶಂಕರ್ ಹೇಳಿದ್ದಾರೆ.
ಇದಿಷ್ಟೇ ಅಲ್ಲದೆ, “ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಸೂಚಿಸಿರುವ ಸುಧಾರಣೆಗಳನ್ನು ಬ್ರಿಕ್ಸ್ ರಾಷ್ಟ್ರಗಳು ಅವಿರೋಧವಾಗಿ ಪಾಲಿಸಬೇಕು. ಕೊರೊನೋತ್ತರ ಸಂದರ್ಭದಲ್ಲಿ ನಾವೆಲ್ಲರೂ ಕೈಗೊಂಡಿರುವ ಆರ್ಥಿಕ ಸಬಲೀಕರಣ ಕ್ರಮಗಳನ್ನು ಬ್ರಿಕ್ಸ್ನ ಎಲ್ಲಾ ರಾಷ್ಟ್ರಗಳೂ ಪರಸ್ಪರ ಬೆಂಬಲಿಸಬೇಕು ಹಾಗೂ ನಮ್ಮ ನಡುವಿನ ಸರಬರಾಜು ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಬೇಕು” ಎಂದು ಜೈಶಂಕರ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ