ಐತಿಹಾಸಿಕ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ: ಪ್ರಧಾನಿ ಮೋದಿ
ಅಲ್ಪಸಂಖ್ಯಾಕರಿಗೆ ನ್ಯಾಯ ಒದಗಿಸುವ ಬಿಜೆಪಿಯ ಹಳೆಯ ಭರವಸೆಯನ್ನು ಈಡೇರಿಸಿದೆ
Team Udayavani, Jan 28, 2020, 3:24 PM IST
ನವದೆಹಲಿ: ಕೇಂದ್ರ ಸರ್ಕಾರ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ನೆರೆಯ ದೇಶಗಳಲ್ಲಿ ವಾಸವಾಗಿರುವ ಧಾರ್ಮಿಕ ಅಲ್ಪಸಂಖ್ಯಾಕರಿಗೆ ನ್ಯಾಯ ಒದಗಿಸುವ ಬಿಜೆಪಿಯ ಹಳೆಯ ಭರವಸೆಯನ್ನು ಈಡೇರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳವಾರ ಎನ್ ಸಿಸಿ 2020 ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಜಮ್ಮು ಕಾಶ್ಮೀರದ ಸಮಸ್ಯೆ ಜಟಿಲವಾಗುತ್ತ ಬಂದಿತ್ತು. ಕೆಲವು ಕುಟುಂಬಗಳು ಮತ್ತು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದವು. ಇದರ ಪರಿಣಾಮ ಭಯೋತ್ಪಾದನೆಗೆ ಅವಕಾಶ ಮಾಡಿಕೊಟ್ಟಂತಾಗಿತ್ತು ಎಂದು ಹೇಳಿದರು.
ಹಲವು ದಶಕಗಳ ಕಾಲದಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ಬಗೆಹರಿಸಲು ಪ್ರಯತ್ನಿಸಿದೆ. ನೆರೆಯ ಪಾಕಿಸ್ತಾನ ಮೂರು ಬಾರಿ ಯುದ್ಧದಲ್ಲಿ ಸೋತಿದೆ. ಆದರೆ ಭಾರತದ ವಿರುದ್ಧ ಕಳ್ಳ ಯುದ್ಧ ಮಾಡುವುದನ್ನು ಮುಂದುವರಿಸಿತ್ತು ಎಂದು ವಾಗ್ದಾಳಿ ನಡೆಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೋಡೋ ಶಾಂತಿ ಒಪ್ಪಂದ, ತ್ರಿವಳಿ ತಲಾಖ್, 370ನೇ ವಿಧಿ ರದ್ದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭರವಸೆ ಈಡೇರಿಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ
Lok Sabha polls:’ಆಪ್ ಕಾ ರಾಮ ರಾಜ್ಯ’ ವೆಬ್ ಸೈಟ್ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ