ವಧುಗಳ ಕನ್ಯತ್ವ ಪರೀಕ್ಷೆ ವಿರೋಧಿಸಿದ್ದಕ್ಕೆ ಥಳಿತ
Team Udayavani, Jan 24, 2018, 6:15 AM IST
ಪುಣೆ: ಮಹಿಳೆಯರ ವಿರುದ್ಧದ ಅನಿಷ್ಟ ಪದ್ಧತಿಯೊಂದರ ವಿರುದ್ಧ ಧ್ವನಿಯೆತ್ತಿದ ಮೂವರು ಯುವಕರಿಗೆ ಅವರದ್ದೇ ಸಮುದಾಯದ ಜನ ಥಳಿಸಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿಯಲ್ಲಿ ನಡೆದಿದೆ.
ಮದುವೆ ದಿನದ ರಾತ್ರಿಯಂದು ವಧುವಿನ ಕನ್ಯತ್ವ ಪರೀಕ್ಷೆ ಮಾಡುವ ಪದ್ಧತಿ ಕಂಜರ್ಭಾತ್ ಸಮುದಾಯದಲ್ಲಿ ಜಾರಿಯಲ್ಲಿದೆ. ಈ ಕೀಳು ಪದ್ಧತಿಯನ್ನು ಹೋಗಲಾಡಿಸುವ ಸಲುವಾಗಿ ಇದೇ ಸಮುದಾಯದ ಯುವಕರು “ಸ್ಟಾಪ್ ದ ವರ್ಜಿನಿಟಿ ರಿಚುವಲ್’ ಎಂಬ ಹೆಸರಿನಲ್ಲಿ ವಾಟ್ಸ್ಆ್ಯಪ್ ಗ್ರೂಪ್ ರಚಿಸಿದ್ದರು. ಇದು ಆ ಸಮುದಾಯದ ಆಕ್ರೋಶಕ್ಕೆ ಕಾರಣವಾಗ್ತಿತು. ಭಾನುವಾರ ರಾತ್ರಿ ತಮ್ಮ ಸಂಬಂಧಿಯೊಬ್ಬರ ಮದುವೆಗೆಂದು ಈ ಯುವಕರು ತೆರಳಿದ್ದರು. ಅವರನ್ನು ನೋಡಿದೊಡನೆ ಸುಮಾರು 40 ಜನರ ಗುಂಪು ತೀವ್ರ ಹಲ್ಲೆ ನಡೆಸಿದೆ. ಜತೆಗೆ, ಬೆದರಿಕೆಯನ್ನೂ ಹಾಕಿದೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಮುದಾಯದ ಅನಿಷ್ಟ ಪದ್ಧತಿಯ ವಿರುದ್ಧ ಈ ಹಿಂದೆಯೂ ಯುವಕರು ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ