ಸೇನೆ ವಿರುದ್ಧ ಆರೋಪಿಸಿದ್ದ ಯೋಧ ಬಹದ್ದೂರ್ ಬಂಧನ, ಮಾನಸಿಕ ಹಿಂಸೆ?
Team Udayavani, Feb 2, 2017, 5:28 PM IST
ನವದೆಹಲಿ: ತಮ್ಮ ಸೇನಾ ಶಿಬಿರದಲ್ಲಿರುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ, ಊಟ ನೀಡಲಾಗುತ್ತಿದೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಆಗುವ ಮೂಲಕ ಬಿಎಸ್ಎಫ್ ಯೋಧ ತೇಜ್ ಬಹಾದ್ದೂರ್ ಸುದ್ದಿ ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಆದರೆ ಇದೀಗ ತನ್ನ ಗಂಡನನ್ನು ಬಂಧಿಸಿ, ಮಾನಸಿಕವಾಗಿ ಹಿಂಸೆ ನೀಡುತ್ತಿರುವುದಾಗಿ ಪತ್ನಿ ಗುರುವಾರ ಗಂಭೀರವಾಗಿ ಆರೋಪಿಸಿದ್ದಾರೆ.
ತನ್ನ ಗಂಡ ತೇಜ್ ಬಹದ್ದೂರ್ ತಮ್ಮ ಜೊತೆಯಲ್ಲಿರುವವರ ಒಬ್ಬರ ಮೊಬೈಲ್ ನಿಂದ ನನಗೆ ಕರೆ ಮಾಡಿ, ತನ್ನನ್ನು ಬಂಧನದಲ್ಲಿಟ್ಟಿದ್ದು, ತನಗೆ ಜೀವ ಬೆದರಿಕೆ ಒಡ್ಡಿ ಮಾನಸಿಕ ಹಿಂಸೆ ಕೊಡುವುತ್ತಿರುವುದಾಗಿ ತಿಳಿಸಿದ್ದಾರೆಂದು ಪತ್ನಿ ಶರ್ಮಿಳಾ ಯಾದವ್ ಹೇಳಿದ್ದಾರೆ.
ಏತನ್ಮಧ್ಯೆ ಬಿಎಸ್ ಎಫ್ ಮೂಲಗಳು, ಈ ಆರೋಪವನ್ನು ಅಲ್ಲಗಳೆದಿದೆ. ತೇಜ್ ಬಹದ್ದೂರ್ ಅವರನ್ನು ಬಂಧಿಸಿಲ್ಲ. ವಿಚಾರಣೆ ವೇಳೆ ತೇಜ್ ಬಹದ್ದೂರ್ ತಪ್ಪಿತಸ್ಥ ಎಂಬುದು ತಿಳಿದು ಬಂದಿದೆ. ತೇಜ್ ಬಹದ್ದೂರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಶಿಫಾರಸು ಮಾಡಲಾಗಿದ್ದು, ಅದಕ್ಕೆ ಈವರೆಗೂ ಅನುಮತಿ ಸಿಕ್ಕಿಲ್ಲ ಎಂದು ವಿವರಿಸಿದೆ.
ಅಲ್ಲದೇ ಜನವರಿ 30ರ ಸಂಜೆ ತೇಜ್ ಬಹದ್ದೂರ್ ಅವರ ವಿಆರ್ ಎಸ್(ಸ್ವಯಂ ಸೇವಾ ನಿವೃತ್ತಿ) ಅನ್ನು ರದ್ದುಗೊಳಿಸಲಾಗಿತ್ತು. ಕೋರ್ಟ್ ವಿಚಾರಣೆ ಬಾಕಿ ಹಂತದಲ್ಲಿರುವಾಗ ಮಾತ್ರ ವಿಆರ್ ಎಸ್ ಅನ್ನು ರದ್ದುಮಾಡಲಾಗುತ್ತದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ