ಅಟ್ಟಾರಿ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಎನ್ ಕೌಂಟರ್ ಗೆ ಇಬ್ಬರು ನುಸುಳುಕೋರರ ಸಾವು
ಮುನ್ನೆಚ್ಚರಿಕಾ ಕ್ರಮವಾಗಿ ಅಟ್ಟಾರಿ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
Team Udayavani, Dec 17, 2020, 10:18 AM IST
ನವದೆಹಲಿ:ಪಂಜಾಬ್ ನ ಅಟ್ಟಾರಿ ಗಡಿ ಪ್ರದೇಶದಲ್ಲಿ ಅಕ್ರಮವಾಗಿ ನುಸುಳಿದ ಇಬ್ಬರನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿರುವ ಘಟನೆ ಗುರುವಾರ(ಡಿಸೆಂಬರ್ 17) ನಸುಕಿನ ವೇಳೆ ನಡೆದಿದೆ ಎಂದು ಬಿಎಸ್ ಎಫ್ ಮೂಲಗಳು ತಿಳಿಸಿವೆ.
ಬಿಎಸ್ ಎಫ್ ದಾಳಿಗೆ ಬಲಿಯಾಗಿರುವ ಇಬ್ಬರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ಹೇಳಿದೆ.
ಅಟ್ಟಾರಿ ಗಡಿ ಪ್ರದೇಶದಲ್ಲಿ ನಸುಕಿನ 2.30ರ ವೇಳೆಗೆ ಇಬ್ಬರು ನುಸುಳುಕೋರರನ್ನು ಬಿಎಸ್ ಎಫ್ ಹೊಡೆದುರುಳಿಸಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿದೆ. ಈ ಎನ್ ಕೌಂಟರ್ ಅಟ್ಟಾರಿಯ ರಜಾತಾಳ್ ಪ್ರದೇಶದಲ್ಲಿ ನಡೆದಿದೆ ಎಂದು ವಿವರಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಅಟ್ಟಾರಿ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ ಅತೀಯಾದ ಮಂಜಿನ ವಾತಾವರಣದಿಂದಾಗಿ ಶೋಧ ಕಾರ್ಯಕ್ಕೆ ಅಡ್ಡಿಯುಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಆರ್.ಎನ್ ಶೆಟ್ಟಿ ಇನ್ನಿಲ್ಲ: ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಇವರ ಕೊಡುಗೆ ಅಪಾರ !
ಇತ್ತೀಚೆಗೆ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಉಗ್ರರು ನಿರಂತರವಾಗಿ ಭಾರತದೊಳಕ್ಕೆ ನುಸುಳಲು ಯತ್ನಿಸುವುದು ಹಾಗೂ ಪಾಕ್ ಸೇನಾಪಡೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಘಟನೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ