ಬಿಎಸ್ಎನ್ಎಲ್ಗೆ ಮರುಜೀವ
Team Udayavani, Oct 24, 2019, 6:00 AM IST
ಹೊಸದಿಲ್ಲಿ: ನಷ್ಟದಲ್ಲಿರುವ ಬಿಎಸ್ಎನ್ಎಲ್ಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಘೋಷಣೆಗಳನ್ನು ಮಾಡಿದೆ. ಬಾಂಡ್ಗಳನ್ನು ಬಿಡುಗಡೆ ಮಾಡುವ ಮೂಲಕ 30 ಸಾವಿರ ಕೋಟಿ ರೂ. ಒದಗಿಸುವುದು, ಬಿಎಸ್ಎನ್ಎಲ್ಗೆ 4ಜಿ ತರಂಗಾಂತರಗಳನ್ನು ಸರಕಾರದ ವೆಚ್ಚದಲ್ಲೇ ಒದಗಿಸುವುದು, ಬಿಎಸ್ಎನ್ಎಲ್ ಹೊಂದಿರುವ ಸೊತ್ತುಗಳನ್ನು ಬಳಕೆ ಮಾಡಿಕೊಳ್ಳುವುದು ಮತ್ತು ಸಿಬಂದಿಗೆ ಸ್ವಯಂ ನಿವೃತ್ತಿ ಯೋಜನೆಗಳ ಘೋಷಣೆಯನ್ನು ಒಳಗೊಂಡ ನಾಲ್ಕು ಹಂತದ ಪ್ಯಾಕೇಜ್ ಅನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.
ಉದ್ಯೋಗಿಗಳಿಗೆ ಸಂಬಳ ಕೊಡಲೂ ಹೆಣಗಾಡುತ್ತಿರುವ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಸಂಸ್ಥೆಗಳಿಗೆ ಸರಕಾರ 29,937 ಕೋಟಿ ರೂ. ಬಂಡವಾಳವನ್ನು ಒದಗಿಸಲಿದೆ. ಇದರ ಜತೆಗೆ ಬಾಂಡ್ಗಳನ್ನು ಬಿಡುಗಡೆ ಮಾಡಿ 15 ಸಾವಿರ ಕೋಟಿ ರೂ. ಹೂಡಿಕೆ ಒದಗಿಸಲಾಗುತ್ತದೆ. ಈ ಬಾಂಡ್ಗಳಿಗೆ ಸರಕಾರ ಗ್ಯಾರಂಟಿಯನ್ನು ನೀಡಲಿದೆ. ಬಿಎಸ್ಎನ್ಎಲ್ ತನ್ನ ಬಳಿ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದು, ಇದನ್ನು ವಾಣಿಜ್ಯಿಕ ಉದ್ದೇಶಕ್ಕೆ ಬಳಕೆ ಮಾಡಿ 38 ಸಾವಿರ ಕೋಟಿ ರೂ. ಗಳಿಸುವ ಪ್ರಸ್ತಾವನೆಯನ್ನೂ ಇದರಲ್ಲಿ ಮಾಡಲಾಗಿದೆ.
ಬಿಎಸ್ಎನ್ಎಲ್-ಎಂಟಿಎನ್ಎಲ್ ವಿಲೀನ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಅನ್ನು ವಿಲೀನಗೊಳಿಸಲಾಗುತ್ತದೆ. ಈ ಪ್ರಕ್ರಿಯೆ ಮುಗಿಯುವವರೆಗೆ ಬಿಎಸ್ಎನ್ಎಲ್ನ ಅಂಗಸಂಸ್ಥೆ ಯಾಗಿ ಕೆಲಸ ಮಾಡುತ್ತದೆ. ಷೇರು ಮಾರುಕಟ್ಟೆಯಲ್ಲಿ ಎಂಟಿಎನ್ಎಲ್ ಲಿಸ್ಟ್ ಆಗಿರುವುದರಿಂದ ವಿಲೀನ ಪ್ರಕ್ರಿಯೆ ಹೆಚ್ಚು ಸಮಯವನ್ನು ತೆಗೆದುಕೊಳ್ಳಲಿದೆ.
ಬರಲಿದೆ ಬಿಎಸ್ಎನ್ಎಲ್ 4ಜಿ
ದೇಶದ ಕೆಲವೆಡೆಗಳಲ್ಲಿ 4ಜಿ ತರಂಗಾಂತರ ಇಲ್ಲ ದಿರುವುದರಿಂದ ಬಿಎಸ್ಎನ್ಎಲ್ ಸೇವೆ ಇತರ ಖಾಸಗಿ ಟೆಲಿಕಾಂ ಸಂಸ್ಥೆಗಳಿಗಿಂತ ಹಿಂದುಳಿದಿತ್ತು. ಹೀಗಾಗಿ ಕೇಂದ್ರ ಸರಕಾರ ತನ್ನದೇ ವೆಚ್ಚದಲ್ಲಿ ಬಿಎಸ್ಎನ್ಎಲ್ಗೆ 4ಜಿ ತರಂಗಾಂತರಗಳನ್ನು ಒದಗಿಸಲು ನಿರ್ಧರಿಸಿದೆ. 2016ರ ಬೆಲೆಯಲ್ಲಿ ತರಂಗಾಂತರಗಳನ್ನು ಒದಗಿಸಲಾಗುತ್ತದೆ. ಇದಕ್ಕೆ 4 ಸಾವಿರ ಕೋಟಿ ರೂ. ವೆಚ್ಚವಾಗಲಿದೆ.
ದೇಶಾದ್ಯಂತ 4ಜಿ ತರಂಗಾಂತರ ಹಂಚಿಕೆ ಮಾಡಲು ಕೇಂದ್ರ ನಿರ್ಧಾರ
30 ಸಾವಿರ ಕೋ.ರೂ. ಜತೆಗೆ ಬಾಂಡ್ ಮೂಲಕ ಬಂಡವಾಳ ಸೌಲಭ್ಯ
ಉದ್ಯೋಗಿಗಳಿಗೆ ಆಕರ್ಷಕ ಸ್ವಯಂ ನಿವೃತ್ತಿ ಯೋಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ