ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಭ್ಯರ್ಥಿಯೇ ನಾಪತ್ತೆ!
15 ದಿನಗಳಿಂದ ಪ್ರಚಾರಕಣಕ್ಕೆ ಬಾರದೇ ತಲೆಮರೆಸಿಕೊಂಡಿರುವ ಅಭ್ಯರ್ಥಿ
Team Udayavani, May 15, 2019, 5:20 PM IST
ವಾರಾಣಸಿ: ಲೋಕಸಭಾ ಚುನಾವಣೆಯ ಅಂತಿಮ ಹಂತ ಬಾಕಿ ಉಳಿದಿದ್ದುಉತ್ತರ ಪ್ರದೇಶದಲ್ಲಿ ಪ್ರಚಾರ ಪರಾಕಾಷ್ಠೆಯನ್ನು ತಲುಪಿದೆ. ಇದೇ ವೇಳೆ ಬಿಎಸ್ಪಿ -ಎಸ್ಪಿ ಮೈತ್ರಿ ಅಭ್ಯರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ.
ಘೋಸಿ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಅತುಲ್ ರಾಯ್ ಕಳೆದ 15 ದಿನಗಳಿಂದ ಪ್ರಚಾರಕ್ಕೆ ಬಾರದೇ ನಾಪತ್ತೆಯಾಗಿದ್ದಾರೆ. ಮೇ 1 ರಂದು ವಿದ್ಯಾರ್ಥಿನಿಯೊಬ್ಬರು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ರಾಯ್ ವಿರುದ್ಧ ದೂರು ದಾಖಲಿಸಿದ ಬಳಿಕ ತಲೆ ಮರೆಸಿಕೊಂಡಿದ್ದಾರೆ.
ಬಂಧನ ಭೀತಿಯಿಂದ ರಾಯ್ ತಲೆ ಮರೆಸಿಕೊಂಡಿದ್ದಾರೆ.ಆದರೆ ಪಕ್ಷದ ಕಾರ್ಯಕರ್ತರು ಮಾತ್ರ ರಾಯ್ ಪರ ಪ್ರಚಾರದಲ್ಲಿ ನಿರತರಾಗಿದ್ದಾರೆ. ರಾಯ್ ವಿರುದ್ಧ ಪಿತೂರಿ ಮಾಡಲಾಗಿದೆ ಎಂದು ಬಿಎಸ್ಪಿ ಹೇಳಿದೆ.
ಕಾರ್ಯಕರ್ತರಿಗೆ ರಾಯ್ ಪರ ಮತಯಾಚನೆ ಮುಂದುವರಿಸಲು ಮಾಯಾವತಿ ಮತ್ತು ಎಸ್ಪಿ ನಾಯಕ ಅಖೀಲೇಶ್ ಯಾದವ್ ಅವರು ಸೂಚನೆ ನೀಡಿದ್ದಾರೆ.
ರಾಯ್ ಮಲೇಷ್ಯಾಗೆ ಪರಾರಿಯಾಗಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದು, ಅವರ ವಿರುದ್ಧ ಲುಕ್ಔಟ್ ನೊಟೀಸ್ ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ.
ರಾಯ್ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಮೇ 23 ರ ವರೆಗೆ ಅವರನ್ನು ಬಂಧಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್