ಕಾಂಗ್ರೆಸ್ ಜತೆ ಮೈತ್ರಿ ಇಲ್ಲ; BJP ಸೋಲಿಗೆ SP-BSP ಸಾಕು: ಮಾಯಾವತಿ
Team Udayavani, Mar 12, 2019, 12:17 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಆಳುವ ಬಿಜೆಪಿಯನ್ನು ಹಣಿಯುವುದಕ್ಕೆ ಬಿಎಸ್ಪಿ – ಎಸ್ಪಿ ಮೈತ್ರಿಯೇ ಸಾಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಹೇಳುವ ಮೂಲಕ ವಿಪಕ್ಷಗಳ ಮಹಾ ಮೈತ್ರಿ ಕೂಟ ರಚನೆಗೆ ಭಾರೀ ಹಿನ್ನಡೆ ಒದಗಿದಂತಾಗಿದೆ.
ಬಹುಜನ ಸಮಾಜ ಪಕ್ಷ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದು ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.
ಬಿಎಸ್ಪಿ ಅಧಿನಾಯಕಿ ಮಾಯಾವತಿ ಹೊರಡಿಸಿರುವ ಹೇಳಿಕೆಯಲ್ಲಿ, “ಬಹುಜನ ಸಮಾಜ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ” ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗಿನ (ಎಸ್ಪಿ) ಚುನಾವಣಾ ಪೂರ್ವ ಮೈತ್ರಿಯು ಪರಸ್ಪರ ಗೌರವ ಮತ್ತು ಪ್ರಾಮಾಣಿಕ ಉದ್ದೇಶಗಳ ನೆಲೆಯಲ್ಲಿ ಆದುದಾಗಿದೆ. ಆಳುವ ಬಿಜೆಪಿಯನ್ನು ಸೋಲಿಸಲು, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ, ಎಸ್ಪಿ-ಬಿಎಸ್ಪಿ ಮೈತ್ರಿಯೊಂದೇ ಸಾಕು’ ಎಂದು ಮಾಯಾವತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ