ಯಾವುದೇ ಮೈತ್ರಿಯಿಲ್ಲದೆ ಚುನಾವಣೆಯನ್ನು ಬಿ ಎಸ್ ಪಿ ಎದುರಿಸಲಿದೆ : ಸತೀಶ್ ಚಂದ್ರ ಮಿಶ್ರಾ
Team Udayavani, Aug 2, 2021, 10:50 AM IST
ಆಗ್ರ : ಉತ್ತರ ಪ್ರದೇಸದಲ್ಲಿ ವಿಧಾನ ಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಮಾತ್ರ ಬಾಕಿ ಇರುವಾಗಲೇ ಪಕ್ಷಗಳ ಚುನಾವಣಾ ಲೆಕ್ಕಾಚಾರ ಆರಂಭವಾಗಿದೆ.
2022ರ ವಿಧಾನ ಸಭಾ ಚುನಾವಣೆಯನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಯಾವ ಮೈತ್ರಿ ಇಲ್ಲದೇ ಎದುರಿಸಲಿದೆ ಎಂದು ಹೇಳಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಹುಜನ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ನಮ್ಮ ಪಕ್ಷ ಯಾಔಉದೇ ಮೈತ್ರಿ ಮಾಡಿಕೊಳ್ಳದೇ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಿದೆ. ಪಕ್ಷ ಯಾವ ಇತರೆ ಪಕ್ಷಗಳ ಸಹಕಾರವನ್ನು ಬಯಸುವುದಿಲ್ಲ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ
ಇನ್ನು, ಈ ಹಿಂದೆ ಜೂನ್ 27 ರಂದು, ಬಹುಜನ ಸಮಾಜವಾದಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಜೊತೆ ಒಪ್ಪಂದ ಮಾಡಿಕೊಂಡಿದೆ ಎಂಬ ವರದಿಯಾಗಿದ್ದನ್ನು ಪಕ್ಷ ತಳ್ಳಿ ಹಾಕಿದೆ.
ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯನ್ನು ಪಕ್ಷ ಏಕಾಂಗಿಯಾಗಿ ಎದುರಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಎಐಎಂಐಎಂ ಹಾಗೂ ಬಿಎಸ್ ಪಿ ಒಪ್ಪಂದ ಮಾಡಿಕೊಂಡು ಉತ್ತರ ಪ್ರದೇಶದ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಿವೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೇ, ಬಹುಜನ ಸಮಾಜವಾದಿ ಪಕ್ಷ ಯಾವುದೇ ಸಂದರ್ಭದಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾಗುವುದಿಲ್ಲ. ಪಕ್ಷ ಏಕಾಂಗಿಯಾಗಿಯೇ ಕಣಕ್ಕಿಳಿಯಲಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರವನ್ನು ಹಿಡಿಯುವ ಭರವಸೆ ಇದೆ ಎಂದಿದ್ದರು.
ಅಂದಹಾಗೆ, ಈ ವಿಷಯದಲ್ಲಿ, ಪಂಜಾಬ್ ಹೊರತುಪಡಿಸಿ, ಯುಪಿ ಮತ್ತು ಉತ್ತರಾಖಂಡದಲ್ಲಿ … ಬಿಎಸ್ ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಮೈತ್ರಿಯೊಂದಿಗೆ ಕಣಕ್ಕಿಳಿಯುವುದಿಲ್ಲ ಎಂದು ಪಕ್ಷವು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ : ” ಕಾಶ್ಮೀರ ಪ್ರೀಮಿಯರ್ ಲೀಗ್” ನಡೆಸಲು ಮುಂದಾದ ಪಾಕಿಸ್ಥಾನ: ಬಿಸಿಸಿಐ ಆಕ್ಷೇಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ