ಬಿಎಸ್ವೈ ಗೋವಾ ಭೇಟಿ ರದ್ದು
Team Udayavani, Sep 17, 2019, 3:00 AM IST
ಪಣಜಿ: ಮಹದಾಯಿ ನೀರು ಹಂಚಿಕೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಸಿಎಂ ಪ್ರಮೋದ ಸಾವಂತ್ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೆ.16- 17ರಂದು ಗೋವಾ ಸಿಎಂ ಜತೆ ಸಮಯ ನಿಗ ದಿಪಡಿಸಿದ್ದನ್ನು ರದ್ದುಗೊಳಿಸಲಾಗಿದೆ. ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಕುರಿತಂತೆ ಸಿಎಂ ಬಿಎಸ್ವೈ ಸಿದ್ಧತೆ ನಡೆಸಿದ್ದು, ಕೊನೇ ಕ್ಷಣದಲ್ಲಿ ಗೋವಾ ಸಿಎಂ ಹೇಳಿಕೆ ನಂತರ ಮಾತುಕತೆ ರದ್ದುಗೊಳಿಸಲಾಗಿದೆ.
ಮಹದಾಯಿ ನೀರು ಹಂಚಿಕೆ ವಿಷಯದಲ್ಲಿ ರಾಜಿ ಇಲ್ಲ ಅಂದ ಮೇಲೆ ಚರ್ಚಿಸುವುದು ಹೇಗೆ, ರಾಜ್ಯ ಸರ್ಕಾರದ ನಿರ್ಣಯ ದೃಢವಾಗಿದೆ. ಸದ್ಯ ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಪ್ರಕರಣದಲ್ಲಿ ಗೋವಾಕ್ಕೆ ನ್ಯಾಯ ಸಿಗಲಿದೆ ಎಂದು ಗೋವಾ ಸಿಎಂ ಹೇಳಿದ್ದರು.
ಕರ್ನಾಟಕದ ಜತೆ ಗೋವಾಕ್ಕೆ ಮಹದಾಯಿ ವಿಷಯ ದ ಮಾತುಕತೆಗೆ ಗೋವಾ ವಿರೋಧ ಪಕ್ಷಗಳು ಆಕ್ಷೇಪಿಸಿ ದ್ದವು. ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿರುವಾಗ ಮುಖ್ಯಮಂತ್ರಿಗಳು ಯಾವುದೇ ಚರ್ಚೆ ನಡೆಸಬಾರದು ಎಂದು ಗೋವಾ ಕಾಂಗ್ರೆಸ್ ಮತ್ತು ಎಂಜಿಪಿ ಮುಖ್ಯ ಮಂತ್ರಿ ಸಾವಂತ್ ಬಳಿ ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸಿಎಂ ತಟಸ್ಥ ನೀತಿ ಅನುಸರಿಸಿದ್ದರು.
ಕೇಂದ್ರ ಜಲಶಕ್ತಿ ಸಚಿವರ ಜತೆ ಮಹದಾಯಿ ಚರ್ಚೆ
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಖಾತೆ ಸಚಿವರೊಂದಿಗೆ ಚರ್ಚಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ನಿವಾರಣೆ ಹಾಗೂ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಮಾತುಕತೆ ಮಾಡು ವಂತೆ ಗೋವಾ ಸಿಎಂ ಪ್ರಮೋದ ಸಾವಂತ ಹಾಗೂ ರಾಜ್ಯದ ಸಿಎಂ ಯಡಿಯೂರಪ್ಪ ಅವರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದೆ.
ಇದಕ್ಕೆ ಗೋವಾ ಸಿಎಂ ಪ್ರಮೋದ ಸಾವಂತ ಒಪ್ಪಿಕೊಂಡಿದ್ದರು. ಆದರೆ ಇದೀಗ ವ್ಯತಿರಿಕ್ತವಾಗಿ ಹೇಳಿಕೆ ನೀಡಿರುವುದು ನೋಡಿದರೆ ಸ್ಥಳೀಯ ರಾಜಕಾರಣ ಇರಬಹುದು ಎನ್ನಿಸುತ್ತಿದೆ ಎಂದರು. ಮಹದಾಯಿ ಯೋಜನೆ ಕುರಿತು ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿದೆ. ಅಧಿಸೂಚನೆ ಹೊರಡಿಸುವುದು ಹಾಗೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೂರು ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಮಾತನಾಡುವ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು