ಬಿಎಸ್‌ವೈ ಗೋವಾ ಭೇಟಿ ರದ್ದು


Team Udayavani, Sep 17, 2019, 3:00 AM IST

Udayavani Kannada Newspaper

ಪಣಜಿ: ಮಹದಾಯಿ ನೀರು ಹಂಚಿಕೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಸಿಎಂ ಪ್ರಮೋದ ಸಾವಂತ್‌ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೆ.16- 17ರಂದು ಗೋವಾ ಸಿಎಂ ಜತೆ ಸಮಯ ನಿಗ ದಿಪಡಿಸಿದ್ದನ್ನು ರದ್ದುಗೊಳಿಸಲಾಗಿದೆ. ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಕುರಿತಂತೆ ಸಿಎಂ ಬಿಎಸ್‌ವೈ ಸಿದ್ಧತೆ ನಡೆಸಿದ್ದು, ಕೊನೇ ಕ್ಷಣದಲ್ಲಿ ಗೋವಾ ಸಿಎಂ ಹೇಳಿಕೆ ನಂತರ ಮಾತುಕತೆ ರದ್ದುಗೊಳಿಸಲಾಗಿದೆ.

ಮಹದಾಯಿ ನೀರು ಹಂಚಿಕೆ ವಿಷಯದಲ್ಲಿ ರಾಜಿ ಇಲ್ಲ ಅಂದ ಮೇಲೆ ಚರ್ಚಿಸುವುದು ಹೇಗೆ, ರಾಜ್ಯ ಸರ್ಕಾರದ ನಿರ್ಣಯ ದೃಢವಾಗಿದೆ. ಸದ್ಯ ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಪ್ರಕರಣದಲ್ಲಿ ಗೋವಾಕ್ಕೆ ನ್ಯಾಯ ಸಿಗಲಿದೆ ಎಂದು ಗೋವಾ ಸಿಎಂ ಹೇಳಿದ್ದರು.

ಕರ್ನಾಟಕದ ಜತೆ ಗೋವಾಕ್ಕೆ ಮಹದಾಯಿ ವಿಷಯ ದ ಮಾತುಕತೆಗೆ ಗೋವಾ ವಿರೋಧ ಪಕ್ಷಗಳು ಆಕ್ಷೇಪಿಸಿ ದ್ದವು. ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿರುವಾಗ ಮುಖ್ಯಮಂತ್ರಿಗಳು ಯಾವುದೇ ಚರ್ಚೆ ನಡೆಸಬಾರದು ಎಂದು ಗೋವಾ ಕಾಂಗ್ರೆಸ್‌ ಮತ್ತು ಎಂಜಿಪಿ ಮುಖ್ಯ ಮಂತ್ರಿ ಸಾವಂತ್‌ ಬಳಿ ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸಿಎಂ ತಟಸ್ಥ ನೀತಿ ಅನುಸರಿಸಿದ್ದರು.

ಕೇಂದ್ರ ಜಲಶಕ್ತಿ ಸಚಿವರ ಜತೆ ಮಹದಾಯಿ ಚರ್ಚೆ
ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಖಾತೆ ಸಚಿವರೊಂದಿಗೆ ಚರ್ಚಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಸ್ಯೆ ನಿವಾರಣೆ ಹಾಗೂ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಮಾತುಕತೆ ಮಾಡು ವಂತೆ ಗೋವಾ ಸಿಎಂ ಪ್ರಮೋದ ಸಾವಂತ ಹಾಗೂ ರಾಜ್ಯದ ಸಿಎಂ ಯಡಿಯೂರಪ್ಪ ಅವರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದೆ.

ಇದಕ್ಕೆ ಗೋವಾ ಸಿಎಂ ಪ್ರಮೋದ ಸಾವಂತ ಒಪ್ಪಿಕೊಂಡಿದ್ದರು. ಆದರೆ ಇದೀಗ ವ್ಯತಿರಿಕ್ತವಾಗಿ ಹೇಳಿಕೆ ನೀಡಿರುವುದು ನೋಡಿದರೆ ಸ್ಥಳೀಯ ರಾಜಕಾರಣ ಇರಬಹುದು ಎನ್ನಿಸುತ್ತಿದೆ ಎಂದರು. ಮಹದಾಯಿ ಯೋಜನೆ ಕುರಿತು ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿದೆ. ಅಧಿಸೂಚನೆ ಹೊರಡಿಸುವುದು ಹಾಗೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೂರು ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಮಾತನಾಡುವ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.