ನಮ್ಮ ಯುದ್ಧ ವಿಮಾನವೇ ಐಎಎಫ್ ನ ಹೆಲಿಕಾಪ್ಟರ್ ಹೊಡೆದುರುಳಿಸಿತ್ತು-ಏನಿದು ಪ್ರಮಾದ?
Team Udayavani, Oct 4, 2019, 2:45 PM IST
ನವದೆಹಲಿ:ಕಾಶ್ಮೀರದಲ್ಲಿ ಫೆಬ್ರುವರಿ 27ರಂದು ನಮ್ಮ ಹೆಲಿಕಾಪ್ಟರ್ ಅನ್ನು ನಮ್ಮ ಮಿಸೈಲ್ ಹೊಡೆದುರುಳಿಸಿದ್ದು ದೊಡ್ಡ ಪ್ರಮಾದವಾಗಿದೆ ಎಂದು ವಾಯುಸೇನೆ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಶುಕ್ರವಾರ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದ್ದ ಶೀತಲ ಯುದ್ಧದ ಸಂದರ್ಭದಲ್ಲಿ ಎಂಐ-17 ಹೆಲಿಕಾಪ್ಟರ್ ಪತನಕ್ಕೀಡಾಗಿತ್ತು. ಇದರಿಂದ ಆರು ಮಂದಿ ಐಎಎಫ್ ನ ಯೋಧರು ಹುತಾತ್ಮರಾಗಿದ್ದರು. ಈ ಕುರಿತು ನಡೆದ ತನಿಖೆಯಲ್ಲಿ, ನಮ್ಮ ಯುದ್ಧ ವಿಮಾನವೇ ಎಂಐ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ್ದು ದೃಢಪಟ್ಟಿದೆ ಎಂದು ಏರ್ ಚೀಫ್ ರಾಕೇಶ್ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಇದು ನಮ್ಮಿಂದಾದ ಬಹುದೊಡ್ಡ ಪ್ರಮಾದ ಇದನ್ನು ಒಪ್ಪಿಕೊಳ್ಳುತ್ತೇವೆ. ಅಷ್ಟೇ ಅಲ್ಲ ಇನ್ನು ಮುಂದೆ ಇಂತಹ ತಪ್ಪು ನಡೆಯದಂತೆ ಎಚ್ಚರ ವಹಿಸುವುದಾಗಿ ಹೇಳಿದರು.
ಪಾಕಿಸ್ತಾನದ ಬಾಲಕೋಟ್ ಮೇಲೆ ಭಾರತೀಯ ಸೇನೆ ಜೈಶ್ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ ಮರುದಿನ (ಫೆ.27) ಪಾಕಿಸ್ತಾನ ಪ್ರತೀಕಾರಕ್ಕಾಗಿ ಯುದ್ಧ ವಿಮಾನಗಳನ್ನು ಕಳುಹಿಸಿತ್ತು. ಈ ಸಂದರ್ಭದಲ್ಲಿ ತಪ್ಪಾಗಿ ಗ್ರಹಿಸಿದ ಭಾರತೀಯ ವಾಯುಪಡೆ ಯುದ್ಧ ವಿಮಾನ ಶ್ರೀನಗರದಲ್ಲಿ ನಮ್ಮದೇ ಎಂಐ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ