ಲೋಕ ಸಭೆ: ಗದ್ದಲದ ನಡುವೆ ಬಜೆಟ್ಗೆ ಒಪ್ಪಿಗೆ
Team Udayavani, Mar 15, 2018, 6:00 AM IST
ನವದೆಹಲಿ: ಮುಂದಿನ ಹಣಕಾಸು ವರ್ಷಕ್ಕೆ ಅಗತ್ಯವಾಗಿರುವ ಬಜೆಟನ್ನು ಲೋಕಸಭೆ ಬುಧವಾರ ಗದ್ದಲದ ನಡುವೆಯೇ ಅಂಗೀಕರಿಸಿದೆ. ಪ್ರತಿಪಕ್ಷಗಳು ಮತ್ತು ಎನ್ಡಿಎ ಅಂಗಪಕ್ಷಗಳು ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ನಡೆಸುತ್ತಿ ರುವಂತೆಯೇ 89.25ಲಕ್ಷ ಕೋಟಿ ಮೊತ್ತದ ಬಜೆಟ್ ಹಾಗೂ 2018ರ ಹಣಕಾಸು ಮಸೂದೆಗೆ ಚರ್ಚೆಯಿಲ್ಲದೆ ಒಪ್ಪಿಗೆ ಸೂಚಿಸಲಾಗಿದೆ. ಅದಕ್ಕಾಗಿಯೇ ಬಿಜೆಪಿ ತನ್ನ ಲೋಕಸಭಾ ಸದಸ್ಯರಿಗೆ ಮೂರು ದಿನಗಳ ಕಾಲ ಸದನದಲ್ಲಿ ಹಾಜರಿರಬೇಕು ಎಂದು ವಿಪ್ ಹೊರಡಿಸಿತ್ತು. ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿರುವ 21 ತಿದ್ದುಪಡಿಗಳನ್ನು ಒಳಗೊಂಡಿರುವ 2018-19ನೇ ಸಾಲಿನ ಹಣಕಾಸು ಮಸೂದೆಗೆ ಧ್ವನಿಮತದ ಮೂಲಕ ಅನುಮೋದನೆ ಪಡೆದುಕೊಳ್ಳ ಲಾಯಿತು. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಐದನೇ ಮತ್ತು ಕೊನೆಯ ಬಜೆಟ್ ಪ್ರಕ್ರಿಯೆ ಕೊನೆಗೊಂಡಂತಾಗಿದೆ. ಆದರೆ ಪ್ರತಿಪಕ್ಷಗಳು ಚರ್ಚೆಗೆ ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಪ್ರತಿಪಕ್ಷ ಕಾಂಗ್ರೆಸ್ ಜತೆ ಎನ್ಸಿಪಿ ಮತ್ತು ಟಿಎಂಸಿ ಸಭಾತ್ಯಾಗ ಮಾಡಿದವು. ಇದಕ್ಕೆ ತೆಲಗು ಪಕ್ಷಗಳಾದ ಟಿಡಿಪಿ, ಟಿಆರ್ಎಸ್ ಮತ್ತು ವೈಎಸ್ಆರ್-ಕಾಂಗ್ರೆಸ್ ಕೂಡ ಘೋಷಣೆ ಕೂಗಿ ಆಕ್ಷೇಪಿಸಿದವು. ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಿದೆ.
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿಯೂ ಸತತ ಎಂಟನೇ ದಿನವೂ ಯಾವುದೇ ರೀತಿಯ ಕಲಾಪ ನಡೆಸಲು ಸಾಧ್ಯವಾಗದೇ ಇರುವುದರಿಂದ ಗುರುವಾರಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು