ಬುಲಂದ್ಶಹರ್: ಎಸ್ಐ ಹತ್ಯೆ ಆರೋಪಿ BJP ಯುವ ಮೋರ್ಚಾ ನಾಯಕ ಅರೆಸ್ಟ್
Team Udayavani, Jan 10, 2019, 5:38 AM IST
ಹೊಸದಿಲ್ಲಿ : ಉತ್ತರ ಪ್ರದೇಶದ ಬುಲಂದ್ ಶಹರ್ ಹಿಂಸೆಯಲ್ಲಿ ನಡೆದಿದ್ದ ಪೊಲೀಸ್ ಅಧಿಕಾರಿಯ ಹತ್ಯೆಗೆ ಸಂಬಂಧಿಸಿದ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿರುವ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ವಾಲ್ ಎಂಬಾತನನ್ನು ಪೊಲೀಸರು ಉತ್ತರ ಪ್ರದೇಶದ ಹಾಪುರ್ ನಲ್ಲಿ ಇಂದು ಗುರುವಾರ ನಸುಕಿನ ವೇಳೆಯಲ್ಲಿ ಬಂಧಿಸಿದ್ದಾರೆ.
ಗೋಹತ್ಯೆಗೆ ಸಂಬಂಧಿಸಿ ಬುಲಂದ್ಶಹರ್ನಲ್ಲಿ ಕಳೆದ ವರ್ಷ ಡಿ.3ರಂದು ಭುಗಿಲೆದ್ದಿದ್ದ ಹಿಂಸೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸುಬೋಧ್ ಸಿಂಗ್ ಮತ್ತು ಸುಮಿತ್ ಕುಮಾರ್ ಎಂಬ ತರುಣನನ್ನು ಉದ್ರಿಕ್ತ ಜನಸಮೂಹ ಚಚ್ಚಿ ಕೊಂದಿತ್ತು. ಇದಕ್ಕೆ ಶಿಖರ್ ಅಗರ್ವಾಲ್ ಕುಮ್ಮಕ್ಕು ನೀಡಿದ್ದ ಎನ್ನಲಾಗಿದೆ.
ಪ್ರಕರಣದ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿರುವ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ವಾಲ್ ನನ್ನು ಇಂದು ನಸುಕಿನ ವೇಳೆ ಬಂಧಿಸಲಾಗಿದ್ದು ಆತನನ್ನು ಪ್ರಶ್ನಿಸಿದ ಬಳಿಕ ಇಂದು ಸಂಜೆಯ ವೇಳೆಗೆ ಕೋರ್ಟಿನಲ್ಲಿ ಹಾಜರುಪಡಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ (ಬುಲಂದ್ಶಹರ್ ನಗರ) ಅತುಲ್ ಕುಮಾರ್ ಶ್ರೀವಾಸ್ತವ ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ