Madhya Pradesh: ಬುಲ್ಡೋಜರ್ ಕಾರ್ಯಾಚರಣೆ ಶುರು ಮಾಡಿದ ನೂತನ ಸಿಎಂ ಯಾದವ್
ಬಿಜೆಪಿ ಮುಖಂಡನ ಮೇಲೆ ದಾಳಿ ಮಾಡಿದವರ ಮನೆ ಧ್ವಂಸ
Team Udayavani, Dec 14, 2023, 9:25 PM IST
ಭೋಪಾಲ್ : ಅಧಿಕಾರ ಸ್ವೀಕರಿಸಿ ವಾರದ ಒಳಗೆ ಉತ್ತರಪ್ರದೇಶ ಮಾದರಿಯಲ್ಲೇ ಮಧ್ಯಪ್ರದೇಶದಲ್ಲಿ ಸಿಎಂ ಮೋಹನ್ ಯಾದವ್ ಅವರು ಬುಲ್ಡೋಜರ್ ಕಾರ್ಯಾಚರಣೆ ಶುರು ಮಾಡಿಸಿದ್ದಾರೆ.
ಮೋಹನ್ ಯಾದವ್ ಅವರು ಗುರುವಾರ (ಡಿ14) ಭೋಪಾಲ್ನಲ್ಲಿ ಬಿಜೆಪಿ ಮುಖಂಡ ದೇವೇಂದ್ರ ಠಾಕೂರ್ ಅವರ ಮೇಲೆ ದಾಳಿ ಮಾಡಿದ ವ್ಯಕ್ತಿಯ ಮನೆ ಮೇಲೆ ಬುಲ್ಡೋಜರ್ ಕ್ರಮಕ್ಕೆ ಆದೇಶಿಸಿದ್ದಾರೆ. ಬಿಜೆಪಿ ನಾಯಕನ ಕೈಗಳನ್ನು ಕತ್ತರಿಸಿದ ಆರೋಪದ ಮೇಲೆ ಫಾರೂಖ್ ರೈನ್ ಅಲಿಯಾಸ್ ಮಿನ್ನಿ ಯ ಮನೆಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಮತ್ತು ಭೋಪಾಲ್ ಕಲೆಕ್ಟರ್ ಸಮ್ಮುಖದಲ್ಲಿ ಕೆಡವಲಾಯಿತು.
ಭೋಪಾಲ್ ನ ಜನತಾ ಕಾಲೋನಿಯಲ್ಲಿರುವ ಫಾರೂಖ್ ರೈನ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ಡಿಸೆಂಬರ್ 3 ರಂದು ಬಿಜೆಪಿ ಕಾರ್ಯಕರ್ತ ದೇವೇಂದ್ರ ಠಾಕೂರ್ ಮೇಲೆ ನಾಲ್ವರು ಆರೋಪಿಗಳೊಂದಿಗೆ ಹಲ್ಲೆ ನಡೆಸಿ ಕೈಯನ್ನು ಕತ್ತರಿಸಿದ್ದ. ಪ್ರಕರಣದಲ್ಲಿ ಐವರು ಆರೋಪಿಗಳಾದ ಫಾರೂಖ್, ಅಸ್ಲಂ, ಶಾರುಖ್, ಬಿಲಾಲ್ ಮತ್ತು ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಮೋಹನ್ ಯಾದವ್ ಅವರು ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬುಲ್ಡೋಜರ್ ಕಾರ್ಯಾಚರಣೆ ಇದಾಗಿದೆ. ಅಧಿಕಾರ ಸ್ವೀಕರಿಸಿದ ನಂತರ ಒಂದರ ಹಿಂದೆ ಒಂದರಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರದ ಅವಧಿಯಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಹಲವು ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.