ಎತ್ತಿನ ಗಾಡಿ ಓಟ: ಸುಪ್ರೀಂ ಮೊರೆ ಹೋಗಲಿರುವ ಮಹಾರಾಷ್ಟ್ರ
Team Udayavani, Oct 26, 2017, 4:13 PM IST
ಮುಂಬಯಿ:ರಾಜ್ಯದಲ್ಲಿ ಎತ್ತಿನಗಾಡಿ ಓಟಕ್ಕೆ ಬಾಂಬೆ ಹೈಕೋರ್ಟ್ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಗಳಿವೆ.
ಈ ಹಿಂದೆ ರಾಜ್ಯ ಸರಕಾರ ರಾಜ್ಯದಲ್ಲಿ ಎತ್ತಿನಗಾಡಿ ಓಟಗ್ರಾಮೀಣ ಸಂಸ್ಕೃತಿಯ ಭಾಗವೆಂದು ಪರಿಗಣಿಸಿ ಈ ಸ್ಪರ್ಧೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕಾನೂನು ಒಂದನ್ನು ಜಾರಿಗೆ ತಂದಿತ್ತು. ಆದರೆ ರಾಜ್ಯ ಸರಕಾರದ ಈ ಕಾನೂನಿಗೆ ಹೈಕೋರ್ಟ್ ತಡೆ ನೀಡಿತ್ತು.
ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ.