ಕುರುಡು ಕಾಂಚಾಣ! IT ದಾಳಿ-ಸಿಮೆಂಟ್ ಗೋದಾಮಿನಲ್ಲಿ ಕೋಟಿ, ಕೋಟಿ ಹಣ ಪತ್ತೆ
2019 polls: Bundles of currencies found in sacks in cement godown
Team Udayavani, Apr 1, 2019, 2:33 PM IST
ಚೆನ್ನೈ: ಕರ್ನಾಟಕದಲ್ಲಿ ಐಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ತಮಿಳುನಾಡಿನ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಭರ್ಜರಿ ಬೇಟೆಯಾಡಿದ್ದಾರೆ. ವೆಲ್ಲೂರು ಗೋಡೌನ್ ವೊಂದರಲ್ಲಿ ಕೋಟಿ, ಕೋಟಿ ನಗದು ದೊರೆತಿದ್ದು, ಪ್ರತಿ ನೋಟಿನ ಬಂಡಲ್ ಮೇಲೆ ವಾರ್ಡ್ ನಂಬರ್ ನಮೂದಿಸಿರುವುದು ಪತ್ತೆಯಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸಿಮೆಂಟ್ ಗೋಡೌನ್ ನಲ್ಲಿ ಪತ್ತೆಯಾಗಿರುವ 9ಕೋಟಿಗಿಂತಲೂ ಅಧಿಕ ಹಣ ಡಿಎಂಕೆ ಪಕ್ಷದ ಖಜಾಂಚಿ ಎಸ್.ದೊರೈ ಮುರುಗನ್ ಅವರಿಗೆ ಸೇರಿದ್ದರಬಹುದು ಎಂದು ಐಟಿ ಅಧಿಕಾರಿಗಳು ಶಂಕಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಮುರುಗನ್ ಅವರ ನಿವಾಸ, ಕಚೇರಿ ಮೇಲೆ ಐಟಿ ದಾಳಿ ನಡೆದಿತ್ತು.
ಸೋಮವಾರ ಬೆಳಗ್ಗೆ ದೊರೈ ಮುರುಗನ್ ಅವರ ಆಪ್ತ ಶ್ರೀನಿವಾಸನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಪತ್ತೆಯಾಗಿರುವ ಹಣದ ಮೂಲಗಳ ಬಗ್ಗೆ ವಿಚಾರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ