ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೌರವ್ ದ್ವಿವೇದಿ ನೇಮಕ
Team Udayavani, Nov 15, 2022, 11:46 AM IST
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಮತ್ತು ಮಾಜಿ MyGovIndia ಮುಖ್ಯಸ್ಥ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ.
ಛತ್ತೀಸ್ಗಢ ಕೇಡರ್ನ 1995-ಬ್ಯಾಚ್ ಅಧಿಕಾರಿಯಾಗಿದ್ದ ದ್ವಿವೇದಿ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಪ್ರಸ್ತುತ, ಅವರು ಛತ್ತೀಸ್ಗಢ ಸರ್ಕಾರದಲ್ಲಿ ವಾಣಿಜ್ಯ ತೆರಿಗೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
2016 ರಲ್ಲಿ ಮೋದಿ ಸರ್ಕಾರದ ಎರಡು ವರ್ಷಗಳನ್ನು ಗುರುತಿಸಲು ‘MyGov Town Hall’ ಅನ್ನು ಆಯೋಜಿಸುವಲ್ಲಿ ದ್ವಿವೇದಿ ಪ್ರಮುಖ ಪಾತ್ರ ವಹಿಸಿದ್ದರು.
ಉತ್ತರ ಪ್ರದೇಶದಿಂದ ಬಂದ ದ್ವಿವೇದಿಯವರು ತಮ್ಮ ಶಾಲಾ ಶಿಕ್ಷಣವನ್ನು ನೋಯ್ಡಾದ ಅಪೀಜಯ್ ಶಾಲೆಯಲ್ಲಿ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆದರು. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಪೊಲಿಟಿಕಲ್ ಸೈನ್ಸ್ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ದ್ವಿವೇದಿ ಅವರು ಛತ್ತೀಸ್ಗಢ ಸರ್ಕಾರಕ್ಕೆ ಸೇರುವ ಮೊದಲು ಕೇರಳದಲ್ಲಿ ಸಹಾಯಕ ಕಲೆಕ್ಟರ್ ಆಗಿ ತಮ್ಮ ಆಡಳಿತ ವೃತ್ತಿಯನ್ನು ಪ್ರಾರಂಭಿಸಿದರು.
ದೂರದರ್ಶನದ ಮಹಾನಿರ್ದೇಶಕ ಮಾಯಾಂಕ್ ಅಗರವಾಲ್ ನಂತರ ಅವರು ಪ್ರಸಾರ ಭಾರತಿ ಸಿಇಒ ಆಗಿ ಹೆಚ್ಚುವರಿ ಪ್ರಭಾರವನ್ನು ಹೊಂದಿದ್ದಾರೆ.
ಇದಕ್ಕೂ ಮುನ್ನ ಪ್ರಸಾರ ಭಾರತಿಯ ಸಿಇಒ ಶಶಿ ಶೇಖರ್ ವೆಂಪತಿ ಅವರ ಐದು ವರ್ಷಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಈ ಹಿನ್ನೆಲೆಯಲ್ಲಿ ದ್ವಿವೇದಿ ಅವರನ್ನು ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ : ಪ್ರವಾಸಿಗರ ಸುರಕ್ಷೆಗೆ ಆದ್ಯತೆ : ಮಲ್ಪೆ ಬೀಚ್, ದ್ವೀಪದಲ್ಲಿ ಈಜು ವಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ