ಗಾಜಿಯಾಬಾದ್: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 5 ಮಂದಿ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ
Team Udayavani, Jul 11, 2023, 8:49 AM IST
ನವ ದೆಹಲಿ: ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಬೆಳಿಗ್ಗೆ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮಾಹಿತಿಯ ಪ್ರಕಾರ, ಕ್ರಾಸಿಂಗ್ ರಿಪಬ್ಲಿಕ್ ಪೊಲೀಸ್ ಸ್ಟೇಷನ್ ಪ್ರದೇಶದ ಬಳಿ NH 9 ನಲ್ಲಿ ಲಾಲ್ಕುವಾನ್ನಿಂದ ದೆಹಲಿಗೆ ಹೋಗುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಹೆದ್ದಾರಿಯಲ್ಲಿ ಬಸ್ ಚಾಲಕ ವಿರುದ್ಧ ದಿಕ್ಕಿನಿಂದ ಬಂದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ಎಂಟು ವರ್ಷದ ಮಗುವೊಂದು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು ದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಯಮುನಾ… ಹೈ ಅಲರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ