ವೈಷ್ಣೋದೇವಿಯಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ಗೆ ಬೆಂಕಿ: 4 ಸಾವು, ಹಲವರಿಗೆ ಗಾಯ
ಅನುಮಾನಾಸ್ಪದವಾಗಿ ಬೆಂಕಿ ಹೊತ್ತಿಕೊಂಡಿದೆ
Team Udayavani, May 13, 2022, 8:09 PM IST
ಜಮ್ಮು: ಕತ್ರಾದ ನಮೈ ಪ್ರದೇಶದಲ್ಲಿ ಜಮ್ಮುವಿಗೆ ತೆರಳುತ್ತಿದ್ದ ಬಸ್ ನಲ್ಲಿ ಶುಕ್ರವಾರ ಅನುಮಾನಾಸ್ಪದವಾಗಿ ಬೆಂಕಿ ಅವಘಡ ಸಂಭವಿಸಿದ್ದು 4 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಕತ್ರಾದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ನೋಮೈ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.
ವೈಷ್ಣೋ ದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕತ್ರಾ ಮೂಲ ಶಿಬಿರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವುಗಳನ್ನು ಖಚಿತಪಡಿಸಿದ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಮುಖೇಶ್ ಸಿಂಗ್, ಆರಂಭಿಕ ತನಿಖೆಯು ಯಾವುದೇ ಸ್ಫೋಟಕವನ್ನು ಬಳಸಿರುವುದನ್ನು ಸೂಚಿಸುವುದಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಫೋರೆನ್ಸಿಕ್ ತಂಡ ಬೆಂಕಿಯ ಕಾರಣವನ್ನು ಪರಿಶೀಲಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…