ಕುಲ್ಲು : 500 ಮೀ. ಪ್ರಪಾತಕ್ಕೆ ಉರುಳಿ ಬಿದ್ದ ಬಸ್ಸು, 20 ಸಾವು, 20 ಮಂದಿ ಗಂಭೀರ
Team Udayavani, Jun 20, 2019, 7:18 PM IST
ಕುಲ್ಲು : ಹಿಮಾಚಲ ಪ್ರದೇಶದ ಕುಲ್ಲು ನಲ್ಲಿ 50 ಜನರಿದ್ದ ಬಸ್ಸು 500 ಮೀಟರ್ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಭೀಕರ ದುರಂತದಲ್ಲಿ 20 ಮಂದಿ ಮೃತಪಟ್ಟು ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ವರದಿಗಳು ತಿಳಿಸಿವೆ.
ಕುಲ್ಲು ವಿನ ಬಜಾರ್ ತೆಹಶೀಲ್ ನಲ್ಲಿ ಈ ದುರಂತ ಇಂದು ಗುರುವಾರ ಮಧ್ಯಾಹ್ನ 4 ಗಂಟೆಯ ವೇಳೆಗೆ ಸಂಭವಿಸಿದೆ. ಬಸ್ಸು ಗಡಗುಶಾನಿ ಎಂಬಲ್ಲಿಗೆ ಹೋಗುತ್ತಿತ್ತು.
ಅಪಘಾತ ನಡೆದ ಸ್ಥಳಕ್ಕೆ ಐದು ಅಂಬುಲೆನ್ಸ್ಗಳು ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಏಳು ವೈದ್ಯರ ತಂಡ ಗಾಯಾಳುಗಳ ತುರ್ತು ವೈದ್ಯಕೀಯ ನೆರವಿಗೆ ಶ್ರಮಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
12 ಮಹಿಳೆಯರು, ಏ ಮಕ್ಕಳು, ಐದರಿಂದ ಆರು ಬಾಲಕಿಯರು ಮತ್ತು 10 ಯುವಕರನ್ನು ಅವಘಡ ತಾಣದಿಂದ ಪಾರುಗೊಳಿಸಲಾಗಿದೆ. ರಕ್ಷಿಸಲ್ಪಟ್ಟವರೆಲ್ಲರೂ ಗಂಭೀರ ಗಾಯಾಳುಗಳಾಗಿದ್ದು ಅವರನ್ನುಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ