Byjus; ಹತಾಶೆಗೊಂಡ ಪೋಷಕರು ಕಚೇರಿಯಿಂದ ಟಿವಿಯೇ ಹೊತ್ತೊಯ್ದರು!
Team Udayavani, Feb 23, 2024, 6:00 AM IST
ಹೊಸದಿಲ್ಲಿ: ಬೈಜೂಸ್ ಸಂಸ್ಥೆಯಿಂದ ಹಣ ಮರು ಪಾವತಿಯಾಗದ ಹಿನ್ನೆಲೆಯಲ್ಲಿ ಕುಟುಂಬವೊಂದು ಬೈಜೂಸ್ ಕಚೇರಿಯಲ್ಲಿದ್ದ ಟಿವಿಯನ್ನೇ ಹೊತ್ತೊಯ್ದಿರುವ ಘಟನೆ ನಡೆದಿದೆ.
ಮೂಲವೊಂದರ ಪ್ರಕಾರ, ಬಳಕೆಯಾಗದ ಟ್ಯಾಬ್ಲೆಟ್ ಮತ್ತು ಕಲಿಕಾ ಕಾರ್ಯಕ್ರಮದ ವಿಚಾರವಾಗಿ ಪಾವತಿಸಿದ್ದ ಹಣವನ್ನು ಮರುಪಾವತಿ ಮಾಡುವಂತೆ ಕುಟುಂಬವೊಂದು ಬೈಜೂಸ್ ಸಂಸ್ಥೆಯಲ್ಲಿ ಕೇಳಿಕೊಂಡಿದೆ. ಆದರೆ ಮರುಪಾವತಿ ವಿಳಂಬವಾದ ಹಿನ್ನೆಲೆಯಲ್ಲಿ ಬೇಸರಗೊಂಡ ಪೋಷಕರು ಸಂಸ್ಥೆಯ ಕಚೇರಿಗೆ ಭೇಟಿ ನೀಡಿ, ಅಲ್ಲಿದ್ದ ಎಲ್ಇಡಿ ಟಿವಿಯನ್ನೇ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.ಇದರ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನೊಂದೆಡೆ, ಫೆಮಾ ತನಿಖೆಗೆ ಸಂಬಂಧಿಸಿ ಕಲಿಕಾ ಸಂಸ್ಥೆ ಬೈಜೂಸ್ನ ಸ್ಥಾಪಕ, ಸಿಇಒ ಬೈಜು ರವೀಂದ್ರನ್ ಅವರನ್ನು ವಿದೇಶಕ್ಕೆ ಹೋಗದಂತೆ ತಡೆಯುವ ನಿಟ್ಟಿನಲ್ಲಿ ಜಾರಿ ನಿರ್ದೇಶನಾಲಯ ಲುಕ್ಔಟ್ ಸಕ್ಯುìಲರ್ ಅನ್ನು ನವೀಕರಿಸಿದೆ. ಅಲ್ಲದೆ ವಿವಿಧ ಬಂದರುಗಳಲ್ಲಿ ಅವರ ಚಲನವಲನಗಳ ಮೇಲೆ ಕಣ್ಣಿಡುವಂತೆ ಅಧಿಕಾರಿಗಳಿಗೆ ಇ.ಡಿ. ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ