ಉ.ಪ್ರ, ಕೇರಳ, ಛತ್ತೀಸ್ ಗಢ್, ತ್ರಿಪುರದ 4 ಕ್ಷೇತ್ರಗಳಿಗೆ ಇಂದು ಉಪಚುನಾವಣೆ
Team Udayavani, Sep 23, 2019, 8:47 AM IST
Representative image
ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಉತ್ತರ ಪ್ರದೇಶ, ಕೇರಳ, ಛತ್ತೀಸ್ ಗಢ್ ಮತ್ತು ತ್ರಿಪುರ ರಾಜ್ಯಗಳ ತಲಾ ಒಂದು ಕ್ಷೇತ್ರಗಳಲ್ಲಿ ಮತದಾನ ಈಗಾಗಲೇ ಆರಂಭವಾಗಿದೆ.
ಉತ್ತರ ಪ್ರದೇಶದ ಹಮಿರ್ಪುರ್, ಕೇರಳದ ಪಾಲ, ಛತ್ತೀಸ್ ಗಢ್ ನ ದಂತೆವಾಡ ಮತ್ತು ತ್ರಿಪುರ ರಾಜ್ಯದ ಬಧಾರ್ ಘಾಟ್ ನಲ್ಲಿ ವಿಧಾನಸಭಾ ಉಪಚುನಾವಣೆ ನಡೆಯುತ್ತಿದೆ.
ಈ ಉಪಚುನಾವಣೆಯ ಮತ ಎಣಿಕೆ ಸಪ್ಟೆಂಬರ್ 27ರಂದು ನಡೆಯಲಿದೆ.
ಚುನಾವಣಾ ಆಯೋಗ ಮತದಾನಕ್ಕಾಗಿ ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಬಳಸುತ್ತಿದೆ.
ಕೇರಳದ ಪಾಲ ಕ್ಷೇತ್ರವನ್ನು 1967ರಿಂದ ಪ್ರತಿನಿಧಿಸುತ್ತಿದ್ದ ಕೇರಳ ಕಾಂಗ್ರೆಸ್ – ಮಣಿ ಪಕ್ಷದ ಸ್ಥಾಪಕ ಕೆ ಎಂ ಮಣಿ ಕಳೆದ ಎಪ್ರಿಲ್ ನಲ್ಲಿ ನಿಧನ ಹೊಂದಿದ ಕಾರಣ ಇಲ್ಲಿ ಸ್ಥಾನ ತೆರವಾಗಿತ್ತು.
ಛತ್ತೀಸ್ ಗಢ್ ನ ದಂತೇವಾಡ ನಕ್ಸಲ್ ಚಟುವಟಿಕೆಗಳಿಗೆ ಕುಖ್ಯಾತಿ ಪಡೆದ ಕ್ಷೇತ್ರ. ಇಲ್ಲಿನ ಬಿಜೆಪಿ ನಾಯಕ ಭೀಮ ಮಾಂದೇವಿ ಎಪ್ರಿಲ್ 9ರಂದು ನಕ್ಸಲ್ ದಾಳಿಗೆ ಬಲಿಯಾದ ಕಾರಣ ಚುನಾವಣೆ ನಡೆದಿರಲಿಲ್ಲ. ಈ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಯೂ ಮೃತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?