ಐಟಿಬಿಪಿಗೆ ಹೆಚ್ಚಿನ ಸಿಬಂದಿ: ಕೇಂದ್ರ ಸಂಪುಟ ನಿರ್ಣಯ
Team Udayavani, Oct 24, 2019, 12:03 AM IST
ಹೊಸದಿಲ್ಲಿ: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಗೆ
(ಐಟಿಬಿಪಿ) ಹೆಚ್ಚಿನ ಸಿಬಂದಿ ನಿಯೋ ಜನೆ, ಚೀನಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಅವರನ್ನು ನಿಯೋಜನೆ ಮಾಡುವ ಉದ್ದೇಶದಿಂದ 2 ಹೊಸ ಘಟಕ ಸ್ಥಾಪನೆಗಳ ನಿಟ್ಟಿನಲ್ಲಿ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ 2001ರ ಬಳಿಕ ಇದೇ ಮೊದಲ ಬಾರಿಗೆ ಸಿಬಂದಿ ಪರಿಷ್ಕರಣೆ ಮಾಡುವ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಗ್ರೂಪ್ ಎ ಸಾಮಾನ್ಯ ಕರ್ತವ್ಯ ವಿಭಾಗದಲ್ಲಿ ಸಿಬಂದಿ ಸಂಖ್ಯೆ ಹೆಚ್ಚು ಮಾಡುವ ನಿರ್ಧಾರದಿಂದಾಗಿ 3 ಸಾವಿರ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುತ್ತದೆ.
ಚೀನಕ್ಕೆ ಹೊಂದಿಕೊಂಡು ಇರುವ 3, 488 ಕಿಮೀ ದೂರದ ಗಡಿ ಪ್ರದೇಶದಲ್ಲಿ ಕಾವಲು ಮತ್ತು ಭದ್ರತೆ ನೀಡುವ ನಿಟ್ಟಿನಲ್ಲಿ 2 ಹೆಚ್ಚುವರಿ ಘಟಕಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಚಂಡೀಗಢ ಮತ್ತು ಗುವಾಹಟಿಯಲ್ಲಿ ಅವುಗಳ ಕೇಂದ್ರ ಕಚೇರಿ ಇರಲಿದೆ. ಒಂದೂವರೆ ವರ್ಷಗಳಿಂದ ಈ ಪ್ರಸ್ತಾವ ಅನುಮೋದನೆಗಾಗಿ ಕೇಂದ್ರ ಸಂಪುಟದ ಮುಂದೆ ಇತ್ತು.
ಗೃಹ ಉಸ್ತುವಾರಿ ಬೇಡ: ಅಸ್ಸಾಂ ರೈಫಲ್ಸ್ ಅತೃಪ್ತಿ
185 ವರ್ಷಗಳಷ್ಟು ಇತಿಹಾಸ ಹೊಂದಿರುವ ಅರೆಸೇನಾ ಪಡೆಯಾದ ಅಸ್ಸಾಂ ರೈಫಲ್ಸ್ ಅನ್ನು ಕೇಂದ್ರ ಗೃಹ ಇಲಾಖೆಯ ಸುಪರ್ದಿಗೆ ತರಲು ನಡೆಸಲಾಗುತ್ತಿರುವ ಪ್ರಯತ್ನಗಳ ಬಗ್ಗೆ ಆ ಪಡೆಯ ಹಿರಿಯ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಸ್ಸಾಂ ರೈಫಲ್ಸ್, ಈಗಿರುವಂತೆ ಭಾರತೀಯ ಸೇನೆಯ ಅಧೀನದಲ್ಲೇ ಮುಂದುವರಿಯಬೇಕು. ಹಾಗೊಂದು ವೇಳೆ ಈ ಪಡೆಯನ್ನು ಗೃಹ ಇಲಾಖೆಯ ವ್ಯಾಪ್ತಿಗೆ ತಂದರೆ, ಭಾರತ-ಚೀನ ಗಡಿಯಲ್ಲಿ ಆ ಪಡೆ ನಿರ್ವಹಿಸುತ್ತಿರುವ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ವಿಚಾರವನ್ನು ಮುಂದಿನವಾರ ಗೃಹ ಇಲಾಖೆಗೆ ಮನವಿ ಮಾಡಿಕೊಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ