ಭತ್ತ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಎಂಎಸ್‌ಪಿ ಹೆಚ್ಚಳಕ್ಕೆ ನಿರ್ಧಾರ

Team Udayavani, Jun 20, 2024, 12:51 AM IST

ಭತ್ತ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಹೊಸದಿಲ್ಲಿ: ಮಂಗಳವಾರ ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರಧಾನಿ ಮೋದಿ ನೇತೃತ್ವದ ಸರಕಾರವು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 2024-25ನೇ ಸಾಲಿಗೆ ಭತ್ತ, ರಾಗಿ, ಜೋಳ, ತೊಗರಿ ಬೇಳೆ ಸೇರಿ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಹೆಚ್ಚಿಸಲು ತೀರ್ಮಾನಿಸಿದೆ.

ತೊಗರಿ ಬೇಳೆಗೆ 550 ರೂ. ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಒಟ್ಟು ಬೆಂಬಲ ಬೆಲೆ 7,550 ರೂ.ಗೆ ಏರಿಕೆಯಾಗಿದೆ. ಹರಿಯಾಣ, ಮಹಾರಾಷ್ಟ್ರ, ಝಾರ್ಖಂಡ್‌ ಮತ್ತು ದಿಲ್ಲಿ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎನ್ನಲಾಗಿದೆ.

ಜೂ. 9ರಂದು ಪ್ರಧಾನಿಯಾಗಿ 3ನೇ ಬಾರಿಗೆ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ 2ನೇ ಬಾರಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಸಾಮಾನ್ಯ ಭತ್ತದ ಎಂಎಸ್‌ಪಿ 117 ರೂ. ಏರಿಕೆಯೊಂದಿಗೆ ಪ್ರತೀ ಕ್ವಿಂಟಾಲ್‌ಗೆ 2,300 ರೂ.ಗಳಾದರೆ, ಎ ಗ್ರೇಡ್‌ ಭತ್ತದ ಎಂಎಸ್‌ಪಿ ಹೆಚ್ಚಳದಿಂದಾಗಿ 2,320 ರೂ.ಗೆ ಏರಿಕೆಯಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದರು.

ಕೃಷಿ ವೆಚ್ಚ ಮತ್ತು ಬೆಲೆ ಆಯೋಗ (ಸಿಎಸಿಪಿ) ಶಿಫಾರಸಿನ ಅನುಸಾರ ಎಂಎಸ್‌ಪಿಯನ್ನು ಹೆಚ್ಚಳ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆಯು ಉತ್ಪಾದನ ವೆಚ್ಚಕ್ಕಿಂತ ಕನಿಷ್ಠ 1.5 ಪಟ್ಟು ಇರಬೇಕು ಎಂದು ಸರಕಾರವು ಸ್ಪಷ್ಟವಾದ ನೀತಿ ನಿರ್ಧಾರವನ್ನು 2018ರ ಬಜೆಟ್‌ನಲ್ಲಿ ಘೋಷಿಸಿತ್ತು. ಅಲ್ಲದೆ ಇತ್ತೀಚೆಗೆ ಉತ್ಪಾದನಾ ವೆಚ್ಚವೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಸಿಎಸಿಪಿ ನೀಡಿದ ವೈಜ್ಞಾನಿಕ ಶಿಫಾರಸಿನ ಅನುಸಾರ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಯಾವ ಬೆಳೆಗೆ ಎಷ್ಟು “ಬೆಂಬಲ’ ಹೆಚ್ಚಳ?

ಬೆಳೆ ಎಂಎಸ್‌ಪಿ (ಪ್ರತೀ ಕ್ವಿಂಟಾಲ್‌) ಸಾಮಾನ್ಯ ಭತ್ತ 117 ರೂ., ಹೈಬ್ರಿಡ್‌ ಬಿಳಿಜೋಳ 191 ರೂ., ಸಜ್ಜೆ 125 ರೂ., ರಾಗಿ 444 ರೂ., ಮೆಕ್ಕೆಜೋಳ 135 ರೂ., ತೊಗರಿಬೇಳೆ 550 ರೂ.ಹೆಸರುಬೇಳೆ 124 ರೂ., ಉದ್ದಿನಬೇಳೆ 450 ರೂ., ನೆಲಗಡಲೆ 406 ರೂ., ಸೂರ್ಯಕಾಂತಿ 520 ರೂ., ಸೋಯಾಬೀನ್‌(ಹಳದಿ) 292 ರೂ., ಎಳ್ಳು 632 ರೂ., ಹುಚ್ಚೆಳ್ಳು 983 ರೂ., ಹತ್ತಿ 501 ರೂ.

Ad

ಟಾಪ್ ನ್ಯೂಸ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Pahalgam terror attack was instigated by Pakistan!

Pahalgam attack: ಪಹಲ್ಗಾಮ್‌ ಉಗ್ರ ದಾಳಿ ಪಾಕಿಸ್ತಾನದ ಚಿತಾವಣೆ!

NCP-Shashikanth

ಶರದ್‌ ಪವಾರ್‌ ಬಣದ ಎನ್‌ಸಿಪಿ ನೂತನ ರಾಜ್ಯಾಧ್ಯಕ್ಷರಾಗಿ ಶಶಿಕಾಂತ್‌ ಶಿಂಧೆ ನೇಮಕ

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.