ಆರೋಪಿ ಪಲಾಯನಕ್ಕೆ ತಡೆ
Team Udayavani, Jul 26, 2018, 6:00 AM IST
ಹೊಸದಿಲ್ಲಿ: ಆರ್ಥಿಕ ಅಪರಾಧಗಳನ್ನು ಎಸಗಿ ವಿದೇಶಕ್ಕೆ ಪರಾರಿಯಾಗುವುದನ್ನು ತಡೆಯುವ ಮಸೂದೆಗೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ವಿಜಯ್ ಮಲ್ಯ ಹಾಗೂ ನೀರವ್ ಮೋದಿಯಂತೆ ದೇಶದಲ್ಲಿ ಆರ್ಥಿಕ ಅಪರಾಧ ಎಸಗಿ, ವಿದೇಶಕ್ಕೆ ಪರಾರಿಯಾಗುವುದನ್ನು ಈ ಮಸೂದೆ ತಡೆಯಲಿದ್ದು, ರಾಜ್ಯಸಭೆಯಲ್ಲಿ ಬುಧವಾರ ಧ್ವನಿ ಮತದಿಂದ ಅನುಮೋದನೆಗೊಂಡಿತು. ಲೋಕಸಭೆಯಲ್ಲಿ ಈ ಮಸೂದೆ ಜುಲೈ 19ರಂದು ಅನುಮೋದನೆಗೊಂಡಿತ್ತು. ರಾಷ್ಟ್ರಪತಿ ಅಂಕಿತದ ನಂತರ ಇದು ಕಾನೂನಾಗಿ ಜಾರಿಗೆ ಬರಲಿದೆ.
ಆರ್ಥಿಕ ಅಪರಾಧ ಎಸಗಿ ವಿದೇಶಕ್ಕೆ ಪರಾರಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಸದ್ಯ ಇರುವ ಮಸೂದೆಯಲ್ಲಿ ಇದನ್ನು ತಡೆಯುವುದು ಸಾಧ್ಯವಿಲ್ಲ. ಅವರ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೂ ಸದ್ಯದ ಮಸೂದೆ ಅವಕಾಶ ನೀಡುತ್ತಿರಲಿಲ್ಲ. ಇದೇ ವೇಳೆ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ಮಂಡಿಸಿದ ಹಕ್ಕುಚ್ಯುತಿ ಗೊತ್ತುವಳಿ ನೋಟಿಸ್ ಪರಿಶೀಲನೆಯಲ್ಲಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ.
ಡಾ.ಸಿಂಗ್ರದ್ದೂ ಪಾರ್ಶ್ವ ಪ್ರವೇಶ
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರದ್ದೂ ಲ್ಯಾಟರಲ್ ಎಂಟ್ರಿಯೇ…! ಪಾರ್ಶ್ವ (ಲ್ಯಾಟರಲ್) ಪ್ರವೇಶದ ಮೂಲಕ 10 ಜಂಟಿ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಕೇಂದ್ರ ಸರಕಾರ, ಇದನ್ನು ಪ್ರಶ್ನಿಸಿರುವವರಿಗೆ ಡಾ. ಸಿಂಗ್ ಉದಾಹರಣೆಯನ್ನು ತೋರಿಸಿದೆ. ಮಾಜಿ ಪ್ರಧಾನಿ ವಿ.ಪಿ. ಸಿಂಗ್ ಸರಕಾರಕ್ಕೆ ಮನಮೋಹನ್ ಸಿಂಗ್ ಅವರು ಸಲಹೆಗಾರರಾಗಿ ನೇಮಕವಾಗಿದ್ದುದು ಇದೇ ಮಾರ್ಗದಲ್ಲಿ ಎಂದು ಪ್ರಧಾನಿ ಕಾರ್ಯಾಲಯದ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಇದರಿಂದ ಐಎಎಸ್ ಅಧಿಕಾರಿಗಳ ನೈತಿಕತೆಗೆ ತೊಂದರೆಯಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ