ಸಬ್ಸಿಡಿ ವಿಸ್ತರಣೆಯಿಂದ ನೆರವು: ಪ್ರಧಾನಿ ಮೋದಿ
Team Udayavani, Mar 26, 2023, 6:55 AM IST
ನವದೆಹಲಿ: ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ವಿಸ್ತರಣೆ ಆಗಿರುವುದರಿಂದ ಫಲಾನುಭವಿಗಳಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗಲಿದೆ ಹಾಗೂ ಶುದ್ಧ ಅಡುಗೆ ಇಂಧನ ಒದಗಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಡಿ ಇಟ್ಟಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಮ್ ಉತ್ಪನ್ನಗಳ ದರ ಏರಿಕೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಎಲ್ಪಿಜಿ ಸಿಲಿಂಡರ್ಗೆ 200 ರೂ. ಸಬ್ಸಿಡಿಯನ್ನು ಶುಕ್ರವಾರ ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿತ್ತು.
“ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟದ ನಿರ್ಧಾರದಿಂದ 9.6 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ