ಸಂಪುಟ ಸರ್ಜರಿ : ಸಂಜೆ 6ಕ್ಕೆ ನಡೆಯುವ ಪ್ರಮಾಣ ವಚನದಲ್ಲಿ 43 ಮಂದಿ ಮೋದಿ ಟೀಮ್ ಗೆ ಎಂಟ್ರಿ..?
Team Udayavani, Jul 7, 2021, 3:50 PM IST
ನವ ದೆಹಲಿ : 2019 ರ ಮೇನಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮಂತ್ರಿ ಮಂಡಲದಲ್ಲಿ ನಡೆಯುತ್ತಿರುವ ಮೊದಲ ಪುನರ್ ರಚನೆಗೆ ಕ್ಷಣ ಗಣನೆ ಆರಂಭವಾಗಿದೆ.
ಇಂದು ( ಬುಧವಾರ, ಜುಲೈ 7) ಸಂಜೆ 6 ಗಂಟೆಗೆ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ರಾಷ್ಟ್ರಪತಿ ಭವನದಲ್ಲಿನಡೆಯಲಿದ್ದು, ಈಗಾಗಲೇ ಸಂಭಾವ್ಯ ಸಚಿವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಂಪುಟ ಪುನರ್ ರಚನೆ ಕಾರ್ಯಕ್ರಮದಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನು ಓದಿ : ಅಮೆಜಾನ್ ಗೆ ತಲೆನೋವಾದ ‘ಅಲೆಕ್ಸಾ’ ಮತ್ತು ‘94% ರಿಯಾಯಿತಿ’
ನಾರಾಯಣ್ ರಾಣೆ, ಸರ್ಬಾನಂದ ಸೋನೊವಾಲ್, ಜ್ಯೋತಿರಾದಿತ್ಯ ಸಿಂಧಿಯಾ, ಅಜಯ್ ಭಟ್, ಭೂಪೇಂದರ್ ಯಾದವ್, ಶೋಭಾ ಕರಂದ್ಲಾಜೆ, ಸುನೀತಾ ದುಗ್ಗಲ್, ಮೀನಾಕ್ಷಿ ಲೇಖಿ, ಭಾರತಿ ಪವಾರ್, ಶಂತನು ಠಾಕೂರ್ ಮತ್ತು ಕಪಿಲ್ ಪಾಟೀಲ್ ಮತ್ತು ಅಪ್ನಾ ದಳದ ಅನುಪ್ರಿಯಾ ಪಟೇಲ್. ಜೆಡಿಯುನ ಆರ್ ಸಿ ಪಿ ಸಿಂಗ್, ಎಲ್ ಜೆಪಿಯ ಪಶುಪತಿ ಪಾರಸ್ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ.
ರಾಜ್ಯ ಸಚಿವರಾದ ಜಿ ಕಿಶನ್ ರೆಡ್ಡಿ, ಪುರುಷೋತ್ತಮ್ ರೂಪಾಲ ಮತ್ತು ಅನುರಾಗ್ ಠಾಕೂರ್ ಮತ್ತಿತರರು ಪ್ರಧಾನಿಯನ್ನು ಭೇಟಿ ಮಾಡಿದ್ದು, ಅವರಿಗೂ ಸಂಪುಟ ದರ್ಜೆಗೆ ಬಡ್ತಿ ಸಿಗುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ಮಾಹಿತಿ ನೀಡಿವೆ.
ಇನ್ನು, ಕೇಂದ್ರ ಸಚಿವರಾದ ಆರ್ ಕೆ ಸಿಂಗ್, ಮನ್ಸುಖ್ ಮಾಂಡವಿಯಾ ಮತ್ತು ಹರ್ದೀಪ್ ಸಿಂಗ್ ಪುರಿ ಅವರು ಸಹ ಬಡ್ತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುವಕರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಆಡಳಿತಾತ್ಮಕ ಅನುಭವ ಹೊಂದಿರುವವರು, ಬಡ್ತಿ ಪಡೆಯುವವರು ಒಳಗೊಂಡು ಸುಮಾರು 43 ಮಂದಿಗೆ ಸಚಿವ ಸ್ಥಾನದ ಭಾಗ್ಯ ಇಂದು ಮೋದಿ ಸರ್ಕಾರದ ನೂತನ ಸಂಪುಟದಲ್ಲಿ ಸಿಗಲಿದೆ ಎಂದು ಹೇಳಲಾಗಿದೆ.
ಸಂಭಾವ್ಯ ಸಚಿವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಜೊತೆಯಲ್ಲಿದ್ದರು ಎಂದು ವರದಿಯಾಗಿದೆ.
ಇದನ್ನು ಓದಿ : ಶಾಪ್ಸಿ ಮೂಲಕ ಬೇರೆಯವರಿಗೆ ವಸ್ತುಗಳನ್ನು ಬುಕ್ ಮಾಡಿಕೊಡಿ, ನೀವು ಕಮಿಷನ್ ಪಡೆಯಿರಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ