ಲೋಕಸಭೆಯಲ್ಲಿ ಆಂಗ್ಲೋ-ಇಂಡಿಯನ್ ಮೀಸಲು ರದ್ದು; ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಇನ್ನೂ ಹತ್ತು ವರ್ಷಗಳ ಕಾಲ ವಿಸ್ತರಣೆ
Team Udayavani, Dec 5, 2019, 11:44 AM IST
ನವದೆಹಲಿ:ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಇನ್ನೂ ಹತ್ತು ವರ್ಷಗಳ ಕಾಲ ವಿಸ್ತರಿಸುವ ಮಹತ್ವದ ನಿರ್ಣಯಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಆಂಗ್ಲೋ-ಇಂಡಿಯನ್ ಸಮುದಾಯದ ಸದಸ್ಯರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲು ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.
ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆಂಗ್ಲೋ ಇಂಡಿಯನ್ ಸಮುದಾದಯ ಮೀಸಲಾತಿ ಅವಧಿ 2020ರ ಜನವರಿ 25ರಂದು ಮುಕ್ತಾಯಗೊಳ್ಳಲಿದೆ.
ಕಾನೂನಿನ ಪ್ರಕಾರ 543ರ ಸದಸ್ಯ ಬಲದ ಲೋಕಸಭೆಯಲ್ಲಿ 84 ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, 47 ಸ್ಥಾನ ಪರಿಶಿಷ್ಟ ಪಂಗಡಕ್ಕೆ. ಹೆಚ್ಚುವರಿಯಾಗಿ ಸರ್ಕಾರ ಆಂಗ್ಲೋ ಇಂಡಿಯನ್ ಸಮುದಾಯದ ಇಬ್ಬರು ಸದಸ್ಯರನ್ನು ನೇಮಕ ಮಾಡುತ್ತದೆ. ಹೀಗೆ ಲೋಕಸಭೆಯ ಸದಸ್ಯರ ಒಟ್ಟು ಬಲ 545.
ಪ್ರಧಾನಿ ನರೇಂದ್ರ ಮೋದಿ ನೇತೃದ ಮೊದಲ ಅವಧಿಯಲ್ಲಿ ಇಬ್ಬರು ಆಂಗ್ಲೋ ಇಂಡಿಯನ್ ಸಮುದಾಯದ ಸದಸ್ಯರನ್ನು ಲೋಕಸಭೆಗೆ ನೇಮಕ ಮಾಡಿತ್ತು. ಆದರೆ ಎರಡನೇ ಅವಧಿಯಲ್ಲಿ ಯಾವುದೇ ಸದಸ್ಯರನ್ನು ನಾಮನಿರ್ದೇಶನ ಮಾಡಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ