ಶೈಕ್ಷಣಿಕ ಸಾಲಕ್ಕೆ ಬಡ್ಡಿ ವಿನಾಯಿತಿ ಬಲ


Team Udayavani, Mar 30, 2018, 6:00 AM IST

Prakash-Javdekar-600.jpg

ಹೊಸದಿಲ್ಲಿ: ಶಿಕ್ಷಣಕ್ಕಾಗಿ ಸಾಲ ಪಡೆದುಕೊಂಡಿದ್ದೀರಾ? ಇನ್ನು ಅದರ ಬಡ್ಡಿ ಹಾಗೂ ಕಂತನ್ನು ಕೋರ್ಸ್‌ ಮುಗಿದು ಒಂದು ವರ್ಷದವರೆಗೂ ಪಾವತಿ ಮಾಡಬೇಕಾಗಿಲ್ಲ. ಇಂಥ ವ್ಯವಸ್ಥೆಯನ್ನು ಕೇಂದ್ರ ಸರಕಾರವೇ ಒದಗಿಸಿದೆ. ಅದಕ್ಕಾಗಿಯೇ ಕೇಂದ್ರದ ವತಿಯಿಂದ 6,600 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2017-18ರಿಂದ 2019-20ನೇ ಸಾಲಿನ ವರೆಗೆ ಸುಮಾರು ಹತ್ತು ಲಕ್ಷ ವಿದ್ಯಾರ್ಥಿಗಳಿಗೆ ಯೋಜನೆ ನೆರವಾಗಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಹೇಳಿದ್ದಾರೆ. ಪ್ರತಿ ವರ್ಷ 2,200 ಕೋಟಿ ರೂ. ಮೊತ್ತವನ್ನು ಬಡ್ಡಿ ಪಾವತಿಗಾಗಿಯೇ ಸರಕಾರ ಮೀಸಲಿರಿಸಿದೆ.

ಶೈಕ್ಷಣಿಕ ಸಾಲದಲ್ಲಿ ಇದುವರೆಗೆ, ಸಾಲದ ಕಂತು ಆರಂಭವಾಗಲು ಕೋರ್ಸ್‌ ಮುಗಿದ ಮೇಲೆ ಒಂದು ವರ್ಷದ ಹೆಚ್ಚುವರಿ ಕಾಲಾವಕಾಶ ಇರುತ್ತಿತ್ತಾದರೂ ಬಡ್ಡಿಯ ಮೊತ್ತವನ್ನು ಸಾಲ ಕೊಟ್ಟಂದಿನಿಂದಲೇ ಪರಿಗಣಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸಾಲದ ಕಂತು ಆರಂಭವಾಗುವ ದಿನದಿಂದ ಬಡ್ಡಿ ಲೆಕ್ಕ ಹಾಕಲಾಗುತ್ತದೆ. ಸರಳವಾಗಿ ಹೇಳುವುದಿದ್ದರೆ ಎರಡು ವರ್ಷಗಳ ಸ್ನಾತಕೋತ್ತರ ಪದವಿ ಆಗಿದ್ದರೆ, ಕೋರ್ಸ್‌ ಮುಗಿದ ಒಂದು ವರ್ಷದವರೆಗೆ ಬಡ್ಡಿ ವಿಧಿಸಲಾಗುವುದಿಲ್ಲ. 2018-19ನೇ ಸಾಲಿನಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದರೆ, 2019-20 ಮತ್ತು ಒಂದು ವರ್ಷದವರೆಗೆ ಅಂದರೆ 2021ರ ವರೆಗೆ ಅದನ್ನು ಪಾವತಿ ಮಾಡಬೇಕಾಗಿಲ್ಲ.

ಆದಾಯ ಮಿತಿ: ವಾರ್ಷಿಕ ಆದಾಯ 4.5 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿದ್ದಾರೆ. ಈ ಯೋಜನೆ ವ್ಯಾಪ್ತಿಯಲ್ಲಿ 7.50 ಲಕ್ಷ ರೂ. ವರೆಗೆ ಶೈಕ್ಷಣಿಕ ಸಾಲ ಪಡೆಯಲು ಅವಕಾಶ ಇದೆ. ಅದಕ್ಕೆ ಸರಕಾರವೇ ಬಡ್ಡಿ ಪಾವತಿಸಲಿದೆ. ಯೋಜನೆಗಾಗಿ 2009ರಿಂದ 2014ರ ವರೆಗೆ ಪ್ರತಿ ವರ್ಷ 800 ಕೋಟಿ ರೂ. ವೆಚ್ಚ ಮಾಡಿದೆ ಎಂದಿದ್ದಾರೆ ಸಚಿವ ಜಾಬ್ಡೇಕರ್‌. 2014ರಿಂದ 2017ರ ಅವಧಿಯಲ್ಲಿ ಈ ಯೋಜನೆಗಾಗಿ  ಪ್ರತಿ ವರ್ಷ 1,800 ಕೋಟಿ ರೂ. ನೀಡಲಾಗಿದೆ ಎಂದಿದ್ದಾರೆ. ಈ ಯೋಜನೆಗೆ ಬಡ್ಡಿ ಪ್ರಮಾಣವೂ ಕಡಿಮೆ ಇರಲಿದೆ.

ಪಠ್ಯಗಳಲ್ಲಿ ಕ್ಯೂಆರ್‌ ಕೋಡ್‌
2019ರಿಂದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಅಳವಡಿಸಲಾಗುತ್ತದೆ. ಅದರಿಂದ ವೆಬ್‌ ಆಧಾರಿತ ಲಿಂಕ್‌ಗಳ ಮೂಲಕ ಆಯಾ ವಿಷಯಕ್ಕೆ ಸಂಬಂಧಿಸಿದ ವೀಡಿಯೋ, ಪ್ರಾತ್ಯಕ್ಷಿಕೆಗಳನ್ನು ನೋಡಲು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಿಂದ ಆ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯಲಿದೆ.

ಮೂರು ಯೋಜನೆ ವಿಲೀನ: ಸರ್ವಶಿಕ್ಷಾ ಅಭಿಯಾನ್‌, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ್‌ ಮತ್ತು ಟೀಚರ್ಸ್‌ ಎಜುಕೇಶನ್‌ (ಟಿ.ಇ) ಅನ್ನು ವಿಲೀನಗೊಳಿಸಲಾಗುತ್ತದೆ ಎಂದೂ  ಜಾಬ್ಡೇಕರ್‌ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಈ ಮೂರು ಯೋಜನೆಗಳನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.