ಕೇಂದ್ರ ಸಂಪುಟದಲ್ಲಿ ಭಾರೀ ಬದಲಾವಣೆ
Team Udayavani, May 15, 2018, 6:00 AM IST
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಂಪುಟದಲ್ಲಿ ಭಾರೀ ಬದಲಾವಣೆ ಮಾಡಿದ್ದಾರೆ. ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗುವ ತನಕ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೆಚ್ಚುವರಿಯಾಗಿ ಹಣಕಾಸು ಮತ್ತು ಕಾರ್ಪೊರೇಟ್ ಖಾತೆ ನಿರ್ವಹಿಸಲಿದ್ದಾರೆ. ಜವುಳಿ, ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆಯಾಗಿರುವ ಸ್ಮತಿ ಇರಾನಿಗೆ ಕೇವಲ ಜವುಳಿ ಖಾತೆ ನಿರ್ವಹಿಸಲು ಸೂಚಿಸಲಾಗಿದೆ. ರಾಜ್ಯವರ್ಧನ ಸಿಂಗ್ ರಾಥೋಡ್ ವಾರ್ತಾ ಮತ್ತು ಪ್ರಸಾರ ಖಾತೆಯ ಹೊಸ ಸಚಿವರಾಗಲಿದ್ದಾರೆ. ಕುಡಿವ ನೀರು ಮತ್ತು ಸ್ವತ್ಛತಾ ಖಾತೆ ಸಹಾಯಕ ಸಚಿವರಾಗಿದ್ದ ಎಸ್.ಎಸ್. ಅಹ್ಲುವಾಲಿಯಾಗೆ ಪ್ರವಾಸೋದ್ಯಮ ಖಾತೆ ಸಹಾಯಕ ಸಚಿವ ಅಲ್ಫೋನ್ಸೋ ಕಣ್ಣಂತಾನಂ ಬಳಿ ಹೆಚ್ಚುವರಿಯಾಗಿದ್ದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆಯನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…