ಡಾರ್ಜಿಲಿಂಗ್: ಕೇಂದ್ರ ಪಡೆಗಳ ಹಿಂದೆಗೆತಕ್ಕೆ ಹೈಕೋರ್ಟ್ ತಡೆ
Team Udayavani, Oct 17, 2017, 4:27 PM IST
ಕೋಲ್ಕತ : ಡಾರ್ಜಿಲಿಂಗ್ ನಿಂದ ಕೇಂದ್ರ ಪಡೆಗಳನ್ನು ತೆರವು ಗೊಳಿಸುವುದಕ್ಕೆ ಕೋಲ್ಕತ ಹೈಕೋರ್ಟ್ ಇಂದು ಮಂಗಳವಾರ ತಡೆಯಾಜ್ಞೆ ನೀಡಿದೆ.
ಪ್ರಕ್ಷುಬ್ಧ ಡಾರ್ಜಿಲಿಂಗ್ನಿಂದ ಕೇಂದ್ರ ಪಡೆಗಳನ್ನು ಹಿಂದೆಗೆದುಕೊಳ್ಳುವ ನಿರ್ಧಾರವು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಕೆಟ್ಟ ನಿರ್ಧಾರವಾಗಿದೆ ಎಂದು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು.
ಅಂತೆಯೇ ಪಶ್ಚಿಮ ಬಂಗಾಲ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಡಾರ್ಜಿಲಿಂಗ್ನಿಂದ ಕೇಂದ್ರ ಪಡೆಗಳನ್ನು ಹಿಂಪಡೆಯುವುದರ ವಿರುದ್ಧ ತಡೆಯಾಜ್ಞೆ ನೀಡಬೇಕೆಂದು ಕೋರಿತ್ತು.
ದೀಪಾವಳಿ ಹಬ್ಬದ ವೇಳೆ ಇತರೆಡೆಗಳಲ್ಲಿ ಕೇಂದ್ರ ಪಡೆಗಳನ್ನು ಬಳಸುವ ಸಲುವಾಗಿ ಡಾರ್ಜಿಲಿಂಗ್ನಲ್ಲಿ ಈ ಹಿಂದೆ ನಿಯೋಜಿಸಲಾಗಿದ್ದ 15 ಕೇಂದ್ರೀಯ ಸಶಸ್ತ್ರ ಪೊಲೀಸ್ ತುಕಡಿಗಳ ಪೈಕಿ ಹತ್ತನ್ನು ಹಿಂದೆಗೆದುಕೊಳ್ಳಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿರುವುದಾಗಿ ಭಾನುವಾರ ವರದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ