
ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ಮೂಲದ ವಿದ್ಯಾರ್ಥಿ ಸಾವು
Team Udayavani, Nov 27, 2022, 3:55 PM IST

ನವದೆಹಲಿ: ಕೆನಡಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ್ ಸೈನಿ (20) ಎಂದು ಹೇಳಲಾಗಿದೆ.
ಘಟನೆ ಬುಧವಾರ ಸಂಜೆ 4:30 ರ ಸುಮಾರಿಗೆ ಯೋಂಗ್ ಸ್ಟ್ರೀಟ್ ಮತ್ತು ಸೇಂಟ್ ಕ್ಲೇರ್ ಅವೆನ್ಯೂ ರಸ್ತೆಯಲ್ಲಿ ಸಂಭವಿಸಿದ್ದು. ಕಾರ್ತಿಕ್ ಸೈಕಲ್ ನಲ್ಲಿ ರಸ್ತೆ ದಾಟುವ ವೇಳೆ ಟ್ರಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ಸುದ್ದಿ ಸಂಸ್ಥೆ ಹೇಳಿದೆ.
2021ರ ಆಗಸ್ಟ್ನಲ್ಲಿ ಭಾರತದಿಂದ ಕೆನಡಾಕ್ಕೆ ತೆರಳಿದ್ದರು. ಕಾರ್ತಿಕ್ ಅವರ ಕುಟುಂಬವು ಹರಿಯಾಣದ ಕರ್ನಾಲ್ನಲ್ಲಿ ನೆಲೆಸಿದೆ ಎಂದು ತಿಳಿದು ಬಂದಿದೆ.
ಕಾರ್ತಿಕ್ ಶೆರಿಡನ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆತನ ಸಾವಿಗೆ ಕಾಲೇಜು ಸಂತಾಪ ವ್ಯಕ್ತಪಡಿಸಿದೆ. ಕಾರ್ತಿಕ್ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸುವ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ : ಕಕ್ಕಿಂಜೆ ಗ್ರಾಮದ ಬಳಿ ಸಾಟಲೈಟ್ ಕರೆ, ಸ್ಪೋಟದ ಸದ್ದು ಪ್ರಕರಣ: ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ 25 ಸಾವಿರಕ್ಕೂ ಅಧಿಕ ಭಕ್ತರ ದಂಡು

ಸಮಾಜದಲ್ಲಿ ತುಳಿತಕ್ಕೆ ಒಳಗಾದ ಪ್ರತಿ ವರ್ಗದ ಅಭಿವೃದ್ಧಿಗೆ ಬದ್ಧ: ಮೋದಿ

ಬಸ್ ಚಾಲಕನ ವೇಗಕ್ಕೆ ಕಳಚಿ ಹೋದ ಚಕ್ರ: ಅಪಾಯದಿಂದ ಪಾರಾದ ಪ್ರಯಾಣಿಕರು

ಕುಂದಾಪುರ: ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ

ಅಂಬೇಡ್ಕರ್ ಪ್ರತಿಮೆ ಭಗ್ನ: ಪೊಲೀಸರಿಂದ ವ್ಯಕ್ತಿ ಬಂಧನ