ಬಿಜೆಪಿ ಬಿಟ್ಟು ಕಾಂಗ್ರೆಸ್ ʼಕೈʼ ಹಿಡಿಯುತ್ತಾರ ವರುಣ್ ಗಾಂಧಿ?: ಈ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?
ಕೇಂದ್ರದ ವಿರುದ್ದವೇ ಜನರ ಸಮಸ್ಯೆ ಬಗ್ಗೆ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದರು.
Team Udayavani, Jan 17, 2023, 3:48 PM IST
ಚಂಡಿಗಢ: ನನ್ನ ಸಿದ್ಧಾಂತ ಹಾಗೂ ವರುಣ್ ಗಾಂಧಿ ಅವರ ಸಿದ್ಧಾಂತಕ್ಕೆ ಹೊಂದಾಣಿಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ (17 ರಂದು) ಹೇಳಿದ್ದಾರೆ.
ಪಂಜಾಬ್ನ ಹೋಶಿಯಾರ್ಪುರನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನನ್ನ ಸಿದ್ಧಾಂತವು ವರುಣ್ ಗಾಂಧಿ ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್ ಎಸ್ ಎಸ್ ಕಚೇರಿಗೆ ಹೋಗುವುದಿಲ್ಲ. ಅಲ್ಲಿಗೆ ಹೋಗುವ ಮುನ್ನ ನನ್ನ ತಲೆ ಕಡಿಯಿರಿ. ನನ್ನ ಕುಟುಂಬ ಒಪ್ಪಿಕೊಂಡ ಸಿದ್ಧಾಂತವೇ ಬೇರೆ ವರುಣ್ ಒಪ್ಪಿಕೊಂಡು ಸಾಗಿದ ಸಿದ್ಧಾಂತವೇ ಬೇರೆ ಎಂದು ಹೇಳಿದರು.
ರಾಜಕೀಯ ಬಿಟ್ಟು ಪರಿವಾರದಲ್ಲಿ ಒಟ್ಟುಗೂಡಬಹುದೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್, ಕುಟುಂಬದ ವಿಚಾರ ಬೇರೆ, ರಾಜಕೀಯ ವಿಚಾರ ಬೇರೆ ಎಂದರು.
ವರುಣ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹಬ್ಬಿತ್ತು. ವರುಣ್ ಗಾಂಧಿ ಕಳೆದ ಕೆಲ ದಿನಗಳಿಂದ ಕೇಂದ್ರದ ವಿರುದ್ದವೇ ಜನರ ಸಮಸ್ಯೆ ಬಗ್ಗೆ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದರು.
ವರುಣ್ ಗಾಂಧಿ ಹಾಗೂ ಅವರ ತಾಯಿ ಮನೇಕಾ ಗಾಂಧಿ ಉತ್ತರ ಪ್ರದೇಶದ ಸಂಸದರಾಗಿದ್ದಾರೆ. ಆದರೆ ಇಬ್ಬರೂ ಇದುವರೆಗೆ ಟ್ವಿಟರ್ ನಲ್ಲಿ ಬಿಜೆಪಿ ಹೆಸರನ್ನು ಬಳಸಿಲ್ಲ. ಇಬ್ಬರೂ ಪ್ರಧಾನಿ ಮೋದಿಯವರ ಮಂತ್ರಿ ಮಂಡಳಿ ಅಥವಾ ಯಾವುದೇ ಪ್ರಮುಖ ಬಿಜೆಪಿ ಸಮಿತಿಯ ಭಾಗವಾಗಿಲ್ಲ. ಕಳೆದ ಯುಪಿ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲೂ ಭಾಗಿಯಾಗಿಲ್ಲ.
#WATCH | Varun Gandhi is in BJP if he walks here then it might be a problem for him. My ideology doesn’t match his ideology.I cannot go to RSS office,I’ll have to be beheaded before that. My family has an ideology. Varun adopted another & I can’t accept that ideology:Rahul Gandhi pic.twitter.com/hEgjpoqlhK
— ANI (@ANI) January 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?