ಬಿಜೆಪಿ ವಿರೋಧಿ ಬಣಕ್ಕೆ ಅಖೀಲೇಶ್ ಯಾದವ್ ಬೆಂಬಲ
Team Udayavani, Apr 16, 2017, 12:51 PM IST
ಲಕ್ನೋ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಬಿಎಸ್ಪಿ ನಾಯಕಿ ಮಯಾವತಿ ಬಿಜೆಪಿ ವಿರುದ್ಧ ಸಮರ ಸಾರಿರುವಂತೆಯೇ, ಎಸ್ಪಿ ನಾಯಕ ಅಖೀಲೇಶ್ ಯಾದವ್ ಅದಕ್ಕೆ ದನಿಗೂಡಿಸಿದ್ದಾರೆ. ಇವಿಎಂಗಳು ವಿಶ್ವಾಸಾರ್ಹತೆ ಕಳೆದುಕೊಂಡಿವೆ. ಮುಂಬರುವ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಕೆ ಮಾಡಬೇಕು. ಚುನಾವಣಾ ಆಯೋಗ ಮತಯಂತ್ರಗಳ ಬಗ್ಗೆ ಎದ್ದಿರುವ ಶಂಕೆ ನಿವಾರಿಸುವ ಉತ್ತರದಾಯಿತ್ವ ಹೊಂದಿದೆ ಎಂದಿದ್ದಾರೆ.
ಲಕ್ನೋದಲ್ಲಿ ಮಾತನಾಡಿದ ಅವರು, “ಬಿಜೆಪಿ ಪ್ರಚಾರದ ವಿರುದ್ಧದ ಬಣದ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ. ಬಿಜೆಪಿ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ನಮ್ಮ ಪಕ್ಷ ಮಹತ್ವದ ಪಾತ್ರ ನಿರ್ವಹಿಸಲಿದೆ’ ಎನ್ನುವ ಮೂಲಕ ಮಾಯಾವತಿ ಪ್ರಯತ್ನಕ್ಕೆ ದನಿಗೂಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅನಂತರ ಬಿಎಸ್ಪಿ ಹಾಗೂ ಎಸ್ಪಿ ನಾಯಕರಿಂದ ಒಮ್ಮತದ ಹೇಳಿಕೆ ಬಂದಿರುವುದು ಇದೇ ಮೊದಲು.
“ಮತಯಂತ್ರದಲ್ಲಿ ಯಾವಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ, ಯಾವಾಗ ಸಾಫ್ಟ್ವೇರ್ ಕೈಕೊಡುತ್ತದೆ ಎಂದು ಹೇಳಲಾಗದು. ಹೀಗಾಗಿ ನಮಗೆ ವಿದ್ಯುನ್ಮಾನ ಮತಯಂತ್ರಗಳ ಮೇಲೆ ವಿಶ್ವಾಸವಿಲ್ಲ’ ಎಂದು ಅಖೀಲೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?