ಮಾತುಕತೆ ಭಾಗಶಃ ಯಶಸ್ವಿ:ರೈತರ ಎರಡು ಬೇಡಿಕೆ ಈಡೇರಿಸಲು ಕೇಂದ್ರದ ಸಮ್ಮತಿ,ಜ.4ಕ್ಕೆ ಮತ್ತೆ ಸಭೆ
ಇನ್ನು ಎರಡು ಬೇಡಿಕೆ ಬಗ್ಗೆ ಜ.4ರ ಮಾತುಕತೆಯಲ್ಲಿ ನಿರ್ಧಾರ
Team Udayavani, Dec 30, 2020, 7:40 PM IST
ನವದೆಹಲಿ:ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಜತೆಗೆ ಬುಧವಾರ (ಡಿಸೆಂಬರ್ 30, 2020) ಕೇಂದ್ರ ಸರ್ಕಾರ ನಡೆಸಿದ ಆರನೇ ಸುತ್ತಿನ ಮಾತುಕತೆಯಲ್ಲಿ ಎರಡು ಬೇಡಿಕೆಯನ್ನು ಈಡೇರಿಸಲು ಒಪ್ಪಿಗೆ ಸೂಚಿಸಿದ್ದು, ಕೃಷಿ ಕಾಯ್ದೆ ಮತ್ತು ಎಂಎಸ್ ಪಿ ಬಗ್ಗೆ ಜನವರಿ 4ರಂದು ಚರ್ಚಿಸುವುದಾಗಿ ತಿಳಿಸಿದೆ.
ಇಂದು ನಡೆದ ಮಾತುಕತೆ ಉತ್ತಮ ವಾತಾವರಣ ಇದ್ದು, ಆಶಾದಾಯಕವಾಗಿ ಮಾತುಕತೆ ಮುಕ್ತಾಯಗೊಂಡಿದೆ. ನಾಲ್ಕು ಪ್ರಮುಖ ಬೇಡಿಕೆಗಳಲ್ಲಿ 2 ಬೇಡಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಎರಡು ಬೇಡಿಕೆ ಬಗ್ಗೆ ಜ.4ರ ಮಾತುಕತೆಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ದೆಹಲಿ ಗಡಿಯಲ್ಲಿ ರೈತರು ಕೇಂದ್ರ ಜಾರಿಗೆ ತಂದ ಮೂರು ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಏತನ್ಮಧ್ಯೆ ಆರನೇ ಸುತ್ತಿನ ಮಾತುಕತೆಗೆ ಒಪ್ಪಿಗೆ ನೀಡಿರುವ 40 ರೈತ ಸಂಘಟನೆಗಳು ಮಾತುಕತೆ ಮುನ್ನ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟಿದ್ದವು.
ಮೂರು ಕಾಯ್ದೆಗಳನ್ನು ರದ್ದುಗೊಳಿಸಬೇಕು, ಕನಿಷ್ಠ ಬೆಂಬಲ ಬೆಲೆಗೆ ಮಾನ್ಯತೆ ನೀಡಬೇಕು ಹಾಗು ಈ ಹಿಂದೆ ಪ್ರಸ್ತಾಪಿಸಿರುವ ಎರಡು ಅಂಶಗಳ ಬಗ್ಗೆ ಚರ್ಚೆ ನಡೆಸುವುದಾಗಿ ಒಪ್ಪಿಗೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ