ಛೇ ಮಾತಾಡಲು ಆಗಲ್ಲ! ಪಟಾಕಿ ಸದ್ದಿಗೆ ಮುನಿಸಿಕೊಂಡ ಸೋನಿಯಾ ಗಾಂಧಿ
Team Udayavani, Dec 16, 2017, 1:17 PM IST
ನವದೆಹಲಿ:ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಶನಿವಾರ ಅಧಿಕಾರ ವಹಿಸಿಕೊಂಡಿದ್ದು, ಸುಮಾರು 19 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿ ತಮ್ಮ ಅಧ್ಯಕ್ಷಗಾದಿಯ ವಿದಾಯ ಭಾಷಣದಲ್ಲಿ ಭಾವುಕರಾದ ಘಟನೆ ನಡೆಯಿತು.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ರಾಹುಲ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷೆಯಾಗಿ ಇದು ನನ್ನ ಕೊನೆಯ ಭಾಷಣ ಎಂದು ಹೇಳಿದರು. ಇನ್ಮುಂದೆ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದರು.
ಭಾಷಣಕ್ಕೆ ಅಡ್ಡಿಯಾದ ಪಟಾಕಿ ಸದ್ದು:
ಸೋನಿಯಾ ಗಾಂಧಿ ಅವರು ಭಾಷಣ ಮಾಡುತ್ತಿದ್ದ ವೇಳೆ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಸಿಡಿಸಿದ ಭಾರೀ ಪ್ರಮಾಣದ ಪಟಾಕಿ ಸದ್ದಿನಿಂದಾಗಿ ಭಾಷಣವನ್ನು ನಿಲ್ಲಿಸಿದರು. ಪಟಾಕಿ ಸದ್ದಿನಿಂದಾಗಿ ಸೋನಿಯಾ ಅವರ ಧ್ವನಿ ಕೇಳಿಸುತ್ತಿರಲಿಲ್ಲವಾಗಿತ್ತು, ಏತನ್ಮಧ್ಯೆ ಸೋನಿಯಾ ಗಾಂಧಿಯವರು ಮಾತನಾಡುತ್ತಿದ್ದಾರೆ ದಯವಿಟ್ಟು ಪಟಾಕಿ ಸಿಡಿಸುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು.
ಭಾರೀ ಸದ್ದಿನಿಂದಾಗಿ ಸೋನಿಯಾ ಗಾಂಧಿ ಅವರು ಕೆಲವು ಬಾರಿ ಭಾಷಣವನ್ನು ಮುಂದುವರಿಸಿ ನಿಲ್ಲಿಸಿದ್ದರು. ಪಟಾಕಿ ಸಿಡಿಸುವುದನ್ನು ನಿಲ್ಲಿಸುವವರೆಗೆ ಭಾಷಣ ಮುಂದುವರಿಸಲ್ಲ ಎಂದು ಸೋನಿಯಾ ಹೇಳಿದ್ದರು.
ಮೈಕ್ ನಲ್ಲಿ ವಿನಂತಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ, ಕೊನೆಗೆ ರಾಹುಲ್ ಗಾಂಧಿಯೇ ತಾಯಿಯ ಹತ್ತಿರ ಬಂದು ಪಟಾಕಿ ಸಿಡಿಸೋದನ್ನು ನಿಲ್ಲಿಸುವುದಾಗಿ ಹೇಳಿದರು. ಈ ಶಬ್ದದಿಂದಾಗಿ ನಾನು ಬೊಬ್ಬೆ ಹೊಡೆಯಬೇಕಾಗಿದೆ ಎಂದರು. ಕೆಲವು ನಿಮಿಷಗಳ ಬಳಿಕ ಮತ್ತೆ ಭಾಷಣ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್