ಪಂಜಾಬ್ ಸಿಂಗ್ ದ್ವಯರ ವೈಮನಸ್ಸಿಗೆ ಕಾಂಗ್ರೆಸ್ ಹೈಕಮಾಂಡ್ ಮುಲಾಮು..!
ಸಿಎಂ ಅಮರಿಂದರ್ ಸಿಂಗ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲಿದೆ : ರಾವತ್
Team Udayavani, Jul 15, 2021, 3:25 PM IST
ಸಾಂದರ್ಭಿಕ ಚಿತ್ರ
ನವ ದೆಹಲಿ : ಪಂಜಾಬ್ ಕಾಂಗ್ರೆಸ್ ನಲ್ಲಿ ಸೃಷ್ಟಿಯಾಗಿದ್ದ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ಒಂದು ತಾರ್ಕಿಕ ಅಂತ್ಯ ಹಾಡಲು ಮುಂದಾಗಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ಅವರ ನಡುವಿನ ವೈಮನಸ್ಸಿಗೆ ಮುಲಾಮು ಹಚ್ಚುವ ಕಾರ್ಯವನ್ನು ರಾಷ್ಟ್ರೀಯ ಕಾಂಗ್ರೆಸ್ ಮಾಡಲು ಹೊರಟಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಖ್ಯಮಂತ್ರಿಯಾಗಿಯೇ ಮುಂದುವರಿಸಿ, ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲು ಕಾಂಗ್ರೆಸ್ ಹೈ ಕಮಾಂಡ್ ನಿರ್ಧರಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಜಾಲಿ ರೈಡ್ಗಾಗಿ ಬೈಕ್ ಕದಿಯುತ್ತಿದ್ದವರ ಸೆರೆ: 38 ಲಕ್ಷ ರೂ. ಮೌಲ್ಯದ 58 ವಾಹನ ವಶ
ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ಪಿಸಿಸಿ(ಪಂಜಾಬ್ ಕಾಂಗ್ರೆಸ್ ಕಮಿಟಿ) ಮುಖ್ಯಸ್ಥರಾಗಿ ನವಜೋತ್ ಸಿಂಗ್ ಸಿಧು ಅವರುನ್ನು ನೇಮಿಸಿವುದಕ್ಕೆ ಮುಂದಾಗಿದ್ದು, ಮಾತ್ರವಲ್ಲದೆ, ಪಂಜಾಬ್ ಕಾಂಗ್ರೆಸ್ ಹಿಂದೂ ಮತ್ತು ದಲಿತ ಸಮುದಾಯಗಳ ಇಬ್ಬರು ಕಾರ್ಯಕಾರಿ ಅಧ್ಯಕ್ಷರನ್ನು ಸಹ ಹೊಂದಿರಲಿದೆ ಎಂದು ಹೇಳಲಾಗಿದೆ.
ಈ ಕುರಿತಾಗಿ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಇಂಡಿಯಾ ಟುಡೆಯೊಂದಿಬಗೆ ಮಾತನಾಡಿ, ಇನ್ನೆರಡು ಮೂರು ದಿನಗಳಲ್ಲಿ ಈ ಕುರಿತಾದ ಅಂತಿಮ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷ ಬರಲಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಬರುವ ವಿಧಾನ ಸಭಾ ಚುನಾವಣೆಯನ್ನು ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದಲ್ಲಿಯೇ ಎದುರಿಸಲಿದ್ದೇವೆ. ಸಿಧು ಗೆ ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷಗಿರಿಯನ್ನು ನೀಡುವುದಕ್ಕೆ ಪಕ್ಷ ತೀರ್ಮಾನಕ್ಕೆ ಬಂದಿದೆ. ಅಧಿಕೃತ ಘೋಷಣೆಯನ್ನು ಎರಡು ಮೂರು ದಿನಗಳಲ್ಲಿ ಪಕ್ಷ ಮಾಡಲಿದೆ ಎಂದು ಕೂಡ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : SSLC ಪರೀಕ್ಷೆ ಈ ಬಾರಿ ಒತ್ತಡ ಸಿಹಿಯಾಗಿದೆ – ಡಾ. ಅಶೋಕ ಕಾಮತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…