ಬ್ಯಾಂಕ್‌ಗಳಿಗೆ ವಂಚಿಸಿ ಪರಾರಿಯಾಗಿದ್ದವನ ಸೆರೆ


Team Udayavani, Oct 17, 2018, 12:53 PM IST

arrest.jpg

ನವದೆಹಲಿ: ಬೆಂಗಳೂರಿನ ಹಲವು ಬ್ಯಾಂಕ್‌ಗಳಿಗೆ  ಲಕ್ಷಾಂತರ ರೂ. ವಂಚಿಸಿ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ  ಉದ್ಯಮಿ ಮೊಹಮ್ಮದ್‌ ಯಾಹ್ಯಾ (47) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಿಬಿಐನ ಬೆಂಗಳೂರು ವಿಭಾಗದ ಆರ್ಥಿಕ ಅಪರಾಧಗಳ ಘಟಕ ಯಶಸ್ವಿಯಾಗಿದೆ.

2003ರಲ್ಲಿ ಇಲ್ಲಿನ ಹಲವು ಬ್ಯಾಂಕ್‌ಗಳಿಗೆ 43 ಲಕ್ಷ ರೂ, ವಂಚಿಸಿದ್ದ ಮೊಹಮ್ಮದ್‌ ಯಾಹ್ಯ, ವಿದೇಶಗಳಲ್ಲಿ ತಲೆ ಮರೆಸಿಕೊಂಡಿದ್ದು, ಬಹ್ರೈನ್‌ಲ್ಲಿ ಠಿಕಾಣಿ ಹೂಡಿದ್ದ. ಆತನ ವಿರುದ್ಧ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆಯೇ ಅಲ್ಲಿ ಬಂಧನವಾಗಿತ್ತು. 

ಈ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತವಾದ ಸಿಬಿಐ ಆರ್ಥಿಕ ಘಟಕದ ಎಸ್ಪಿ ವಿಜಯೇಂದ್ರ ಬಿದರಿ ನೇತೃತ್ವದ ತಂಡ, ಬಹ್ರೈನ್‌ನಿಂದ ಆತನನ್ನು ಗಡಿಪಾರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಬೆಂಗಳೂರಿಗೆ ಕರೆತಂದಿದೆ. ಆರ್ಥಿಕ ಅಪರಾಧ ಎಸಗಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಇತ್ತೀಚೆಗೆ ಗಡಿಪಾರು ಮಾಡಿಸಿಕೊಂಡ ಮೊದಲ ಪ್ರಕರಣ ಇದಾಗಿದೆ.

ಆರೋಪಿ ಮೊಹಮ್ಮದ್‌ ಯಾಹ್ಯಾನನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ಪಡೆದುಕೊಂಡಿರುವ ಸಿಬಿಐ ಅಧಿಕಾರಿಗಳು ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ, 2009ರಲ್ಲಿ ಆತನ ವಿರುದ್ಧ  ತನಿಖೆ ನಡೆಸಿ ಸಲ್ಲಿಕೆಯಾಗಿದ್ದ ದೋಷಾರೋಪ ಪಟ್ಟಿ ಅನ್ವಯದ ಅಂಶಗಳ ಆಧಾರದಲ್ಲಿ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ನ್ಯಾಯಾಲಯದಿಂದ “ಘೋಷಿತ ಅಪರಾಧಿ’ ಎಂದೆನಿಸಿಕೊಂಡಿರುವ ಮೊಹಮದ್‌ ಯಾಹ್ಯ, ವಿದೇಶಗಳಲ್ಲಿ ಉದ್ಯಮ ನಡೆಸುತ್ತಿದ್ದನೇ? ಅಥವಾ ಆತ ವಂಚನೆಗೆ ರೂಪಿಸಿದ ಸಂಚುಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಮೆಹೂಲ್‌ ಚೋಸ್ಕಿ, ನೀರವ್‌ ಮೋದಿ, ವಿಜಯ ಮಲ್ಯ ಸೇರಿದಂತೆ 28 ಆರ್ಥಿಕ ವಂಚನೆಗಳ ಅಪರಾಧಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಹಲವು ರಾಷ್ಟ್ರಗಳ ಜತೆಗೆ ಹಂಚಿಕೊಂಡಿತ್ತು.

ತೀವ್ರ ತನಿಖೆಗೆ ನಿರ್ಧಾರ: ಹತ್ತು ವರ್ಷಗಳ ಹಳೆವರ್ಷಗಳ ಹಳೆ ಪ್ರಕರಣಕ್ಕೆ ಮರುಜೀವ ನೀಡಿರುವ ಸಿಬಿಐ, ಆರೋಪಿ ಯಾಹ್ಯನ ವಿಚಾರಣೆ ವೇಳೆ, ವಂಚನೆಗೆ ಸಂಬಂಧಿಸಿದಂತೆ ಸಾಕ್ಷಧಾರಗಳ ಸಂಗ್ರಹ, ಆತ ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದಂತೆ ಇನ್ನಿತರೆ ವ್ಯಕ್ತಿಗಳೊಂದಿಗೆ ಇನ್ನೂ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನೇ ಎಂಬುದರ ಬಗ್ಗೆಯೂ ತನಿಖೆ ನಡೆಸಲು ತೀರ್ಮಾನಿಸಿದೆ. ಜತೆಗೆ, ಬ್ಯಾಂಕ್‌ಗಳಿಗೆ ವಂಚನೆಗೆ ಸಂಬಂಧಿಸಿದಂತೆ ಆತನಿಗೆ ನೆರವಾದವರ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಬೇಕಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.