ರಸ್ತೆಗೆ ಅಡ್ಡಬಂದ ದನವನ್ನು ಉಳಿಸುವ ಪ್ರಯತ್ನದಲ್ಲಿ ಕಾರು ಪಲ್ಟಿ: ಮೂವರು ಮಹಿಳೆಯರು ಸಾವು
Team Udayavani, Oct 11, 2020, 9:52 AM IST
Representative Image
ಭೋಪಲ್: ರಸ್ತೆಯಲ್ಲಿ ಅಡ್ಡಬಂದ ದನವನ್ನು ಉಳಿಸುವ ಪ್ರಯತ್ನದಲ್ಲಿ ಕಾರು ಪಲ್ಟಿಯಾಗಿ ದಿಲ್ಲಿ ಮೂಲದ ಮೂವರು ಮಹಿಳೆಯರು ಸಾವನ್ನಪ್ಪಿ, ಒಬ್ಬರು ಗಾಯಗೊಂಡ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ನಾಲ್ವರು ಮಹಿಳೆಯರು ಸ್ನೇಹಿತರಾಗಿದ್ದು, ದಿಲ್ಲಿ ಮೂಲದವರಾಗಿದ್ದು, ಇಲ್ಲಿನ ಪ್ರಸಿದ್ದ ಓಂಕಾರೇಶ್ವರ ದೇವಸ್ಥಾನದ ಭೇಟಿಗಾಗಿ ಆಗಮಿಸಿದ್ದರು. ದೇವಸ್ಥಾನದ ಭೇಟಿಯ ನಂತರ ದಿಲ್ಲಿಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.
ಮೃತರನ್ನು ಸಂತೋಶ್ ಕುಮಾರಿ (48), ಗಾಯತ್ರಿ ಸಿಂಗ್ (42), ಪೂನಂ ಭಾರತಿ (40) ಎಂದು ಗುರುತಿಸಲಾಗಿದೆ. 40 ವರ್ಷದ ಬಿಂದು ಶರ್ಮಾ ಕಾರು ಚಾಲನೆ ಮಾಡುತ್ತಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಕೋವಿಡ್-19: ಸೋಂಕು ತಾಗಿದರೂ ಮನೆಯಲ್ಲಿದ್ದ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು
ಸಂತೋಶ್ ಕುಮಾರಿ ಸ್ಥಳದಲ್ಲೇ ಮೃತಪಟ್ಟರೆ, ಗಾಯತ್ರಿ ಸಿಂಗ್ ಮತ್ತು ಪೂನಂ ಭಾರತಿ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಬರುತ್ತಿದ್ದಾಗ ಎದುರಿಗೆ ಬಂದ ದನವನ್ನು ರಕ್ಷಿಸಲು ಹಠಾತ್ತನೆ ಬ್ರೇಕ್ ಹಾಕಿದ್ದೆ. ಇದಿರಿಂದ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ ಎಂದು ಗಾಯಗೊಂಡಿರುವ ಬಿಂದು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ