ಅತೀ ವೇಗದ ಚಾಲನೆ: ಟ್ರಕ್ ಗೆ ಕಾರು ಢಿಕ್ಕಿಯಾಗಿ ಮೂವರು ಮಕ್ಕಳು ಸೇರಿ ಐವರು ಸಾವು
Team Udayavani, Jun 5, 2022, 12:11 PM IST
ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್ ಟ್ರಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರು ಪುಣೆಯಿಂದ ನೆರೆಯ ಕೊಲ್ಲಾಪುರದ ಜಯಸಿಂಗ್ ಪುರಕ್ಕೆ ಹೋಗುತ್ತಿದ್ದಾಗ ಸಾಂಗ್ಲಿಯ ಕಾಸೆಗಾಂವ್ ಪ್ರದೇಶದ ಯೆವಲೆವಾಡಿ ಫಾಟಾ ಪ್ರದೇಶದ ಬಳಿ ಶನಿವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
” ಅಪಘಾತದ ನಂತರ ತೀವ್ರವಾಗಿ ಹಾನಿಗೊಳಗಾದ ಕಾರನ್ನು ಗಮನಿಸಿದಾಗ ಕಾರು ಹೆಚ್ಚಿನ ವೇಗದಲ್ಲಿ ಚಲಿಸುತ್ತಿದೆ ಎಂದು ತೋರುತ್ತದೆ. ಅದರಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ” ಎಂದು ಕಾಸೆಗಾಂವ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಆರ್ ಎಸ್ಎಸ್ ವಿರುದ್ಧ ಮಾತನಾಡಿಯೇ ಕಾಂಗ್ರೆಸ್ ಜನರಿಂದ ದೂರವಾಗಿದೆ: ಸಿಎಂ ಬೊಮ್ಮಾಯಿ
ಮೃತರನ್ನು ಅರಿಂಜಯ್ ಶಿರೋಟೆ (35), ಮತ್ತು ಅವರ ಸಂಬಂಧಿಕರಾದ ಸ್ಮಿತಾ ಶಿರೋಟೆ (38) ಪೂರ್ವ ಶಿರೋಟೆ (14), ಸುನೇಶಾ ಶಿರೋಟೆ (10) ಮತ್ತು ವೀರು ಶಿರೋಟೆ (4) ಎಂದು ಗುರುತಿಸಲಾಗಿದೆ.
ಅರಿಂಜಯ್ ಶಿರೋಟೆ ತನ್ನ ಸಂಬಂಧಿಕರನ್ನು ಜೈಸಿಂಗ್ಪುರಕ್ಕೆ ಬಿಡಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್