cardiac arrest: ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ 20 ವರ್ಷದ ಯುವಕ ಹೃದಯ ಸ್ಥಂಭನದಿಂದ ಸಾವು
Team Udayavani, Jul 24, 2023, 10:58 AM IST
ಮಧುರೈ: ಇಲ್ಲಿನ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ 20 ವರ್ಷದ ಯುವಕನೋರ್ವ ಹೃದಯ ಸ್ಥಂಭನದಿಂದ ಅಸುನೀಗಿದ ಘಟನೆ ರವಿವಾರ ನಡೆದಿದೆ.
ಮೃತ ಯುವಕನನ್ನು ಕಲ್ಲಕುರುಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಉಥಿರಮ್ 2023 ರಕ್ತದಾನ ಮ್ಯಾರಥಾನ್ ನಲ್ಲಿ ಅವರು ಭಾಗವಹಿಸಿದ್ದರು. ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮತ್ತು ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಮ್ಯಾರಥಾನ್ ಗೆ ಚಾಲನೆ ನೀಡಿದ್ದರು.
ಬೆಳಿಗ್ಗೆ ಮ್ಯಾರಥಾನ್ ನ್ನು ಪೂರ್ಣಗೊಳಿಸಿದ ದಿನೇಶ್ ಕುಮಾರ್ ಅವರು ಗಂಟೆಗಳ ಕಾಲ ಆರೋಗ್ಯವಂತರಾಗಿಯೇ ಇದ್ದರು. ಆದರೆ ಬಳಿಕ ಬಳಲಿಕೆ ಕಾಡತೊಡಗಿದ ಕಾರಣ ರೆಸ್ಟ್ ರೂಂ ಗೆ ತೆರಳಿದರು ಎಂದು ಅವರ ಗೆಳೆಯರು ಹೇಳಿದ್ದಾರೆ. ಬಳಿಕ ಅವರು ನೋಡಿದಾಗ ದಿನೇಶ್ ಕುಮಾರ್ ಉಪಸ್ಮಾರದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಸಮೀಪದ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಇದನ್ನೂ ಓದಿ:ನೆಚ್ಚಿನ ನಟನ ಹುಟ್ಟುಹಬ್ಬದ ಬ್ಯಾನರ್ ಅಳವಡಿಸುವ ವೇಳೆ ಜೀವ ಕಳೆದುಕೊಂಡ ಅಭಿಮಾನಿಗಳು
ಆಸ್ಪತ್ರೆಯ ಅಧಿಕಾರಿಗಳು ಅವರನ್ನು ಬೆಳಿಗ್ಗೆ 8:45 ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದರು, ಅಲ್ಲಿ ಅವರಿಗೆ ಕೃತಕ ಉಸಿರಾಟ ಚಿಕಿತ್ಸೆ ನೀಡಲಾಯಿತು.
ಆಸ್ಪತ್ರೆಗೆ ಕರೆತಂದ ಕೆಲವೇ ಗಂಟೆಗಳ ನಂತರ ಬೆಳಗ್ಗೆ 10:10ರ ಸುಮಾರಿಗೆ ಹೃದಯ ಸ್ತಂಭನಕ್ಕೆ ಒಳಗಾದರು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ಅಧಿಕಾರಿಗಳು ಅವರನ್ನು ಬದುಕಿಸಲು ಪ್ರಯತ್ನಿಸಿದರೂ, ಅವರು ಬೆಳಿಗ್ಗೆ 10:45 ಕ್ಕೆ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ದೂರು ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ