Carnatic singer: ಸಂಗೀತ ಅಕಾಡೆಮಿ ಮುಖ್ಯಸ್ಥರ ವಿರುದ್ಧ ಗಾಯಕಿಯರಾದ ರಂಜನಿ, ಗಾಯತ್ರಿ ಕಿಡಿ
Team Udayavani, Mar 26, 2024, 8:21 AM IST
ಹೊಸದಿಲ್ಲಿ: ಚೆನ್ನೈ ಸಂಗೀತ ಅಕಾಡೆಮಿಯಲ್ಲಿ ಎದ್ದಿರುವ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಖ್ಯಾತ ಕರ್ನಾಟಕ ಸಂಗೀತಗಾರ ಟಿ.ಎಂ.ಕೃಷ್ಣನ್ ಅವರಿಗೆ ಪ್ರಶಸ್ತಿ ನೀಡಿದ್ದನ್ನು ಖಂಡಿಸಿ ಸಂಗೀತೋತ್ಸವವನ್ನು ಬಹಿಷ್ಕರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಟೀಕೆ ಮಾಡಿರುವ ಅಕಾಡೆಮಿ ಅಧ್ಯಕ್ಷ ಎನ್.ಮುರಳಿ ವಿರುದ್ಧ ಗಾಯಕಿಯರಾದ ರಂಜನಿ ಮತ್ತು ಗಾಯತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸಂಗೀತದ ಖ್ಯಾತ ಪಂಡಿತ ಸೋದರಿಯರಾದ ಇವರಿಬ್ಬರು ಮುರಳಿ ಅವರ ಹೇಳಿಕೆಯನ್ನು ಅನೀತಿ ಮತ್ತು ಅಪ್ರಾಮಾಣಿಕ ಎಂದು ಕರೆದಿದ್ದಾರೆ.
ಟಿಎಂ ಕೃಷ್ಣನ್ ಅವರಿಗೆ ಪ್ರಶಸ್ತಿ ನೀಡಿದ ಬಳಿಕ ಈ ಸೋದರಿಯರಿಬ್ಬರು ಸಂಗೀತ ಅಕಾಡೆಮಿಯು ವರ್ಷಾಂತ್ಯದಲ್ಲಿ ಆಯೋಜಿಸಿರುವ ಸಂಗೀತೋತ್ಸವದಲ್ಲಿ ಕಾರ್ಯಕ್ರಮ ನೀಡುವುದಿಲ್ಲ ಎಂದು ಘೋಷಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಅಕಾಡೆಮಿಯ ಅಧ್ಯಕ್ಷ ಮುರಳಿ, ಇವರಿಬ್ಬರ ನಡೆಯನ್ನು ಖಂಡಿಸಿದ್ದರು. ಇದೀಗ ಪ್ರತಿಕ್ರಿಯಿಸಿರುವ ರಂಜನಿ ಮತ್ತು ಗಾಯತ್ರಿ, ಪ್ರಶಸ್ತಿ ಕೊಡುವ ನಿಮ್ಮ ವಿಶೇಷತೆಯನ್ನು ನಾವು ಪ್ರಶ್ನಿಸಿದ್ದೇವೆಯೇ? ನಿಮ್ಮ ಹೇಳಿಕೆ ಪ್ರಶಸ್ತಿ ಪಡೆದುಕೊಂಡ ವ್ಯಕ್ತಿಯ ಹೇಳಿಕೆಯಂತೆಯೇ ಇದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Lemon 10-12 ರೂ.! ಗ್ರಾಹಕರ ಜೇಬಿಗೆ ಬಿದ್ದ ಕತ್ತರಿ; ಬಿಸಿಲ ಝಳದಂತೆ ದರವೂ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್